ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ನೀರಿನ ಮಿತಿ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಜಿಲ್ಲೆಯಲ್ಲಿ ಲಘು ನೀರಾವರಿ ಪದ್ಧತಿಯನ್ನು ಜನಪ್ರಿಯಗೊಳಿಸಲು ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತೆ ಸೂಕ್ಷ್ಮ ನೀರಾವರಿ (ಹನಿ ನೀರಾವರಿ ಮತ್ತು ತುಂತುರು ನೀರಾವರಿ) ಘಟಕಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಕೃಷಿ ಇಲಾಖೆಯಿಂದ ಶೇ.90ರ ರಿಯಾಯಿತಿಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಸೌಲಭ್ಯ ಪಡೆಯಲು ಷರತ್ತುಗಳು*
ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 5.0 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ. ಮೊದಲ ಎರಡು ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಸಹಾಯಧನ ಮತ್ತು ಎರಡು ಹೆಕ್ಟೇರ್ ಗಿಂತ ಮೇಲ್ಪಟ್ಟು 5.0 ಹೆಕ್ಟೇರ್ ವರೆಗೆ ಶೇ.45 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ ರೈತರಿಗೆ ಮತ್ತು ಶೇ.55 ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ನೀಡಲು ಅವಕಾಶವಿದೆ.

ಸರ್ಕಾರದಿಂದ ಅನುಮೋದನೆಗೊಂಡಿರುವ ಸಂಸ್ಥೆಗಳಿಂದ ಘಟಕಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಸಹಾಯಧನ ದೊರೆಯುತ್ತದೆ.

ಸೂಕ್ಷ್ಮ ನೀರಾವರಿ ಘಟಕವನ್ನು ಸಹಾಯಧನದಡಿ ಪಡೆಯಲು ಸಾಮಾನ್ಯ ವರ್ಗದ ರೈತರಿಗೆ ಒಮ್ಮೆ ಮಾತ್ರ ಹಾಗೂ ಪರಿಶಿಷ್ಟ ಜಾತಿ ರೈತರಿಗೆ ಏಳು ವರ್ಷಗಳಿಗೊಮ್ಮೆ ಮಾತ್ರ ಅವಕಾಶವಿರುತ್ತದೆ. ಏಳು ವರ್ಷಗಳ ಹಿಂದೆ, ಸೂಕ್ಷ್ಮನೀರಾವರಿ ಸವಲತ್ತು ಪಡೆದ ಪರಿಶಿಷ್ಟ ಜಾತಿ ರೈತರಿಗೆ ಮತ್ತೊಮ್ಮೆ ಸವಲತ್ತು ಪಡೆಯಲು ರೈತರಿಗೆ ಆದ್ಯತೆ ಮೇಲೆ ನೀಡಲಾಗುವುದು.

‌‌‌ರೈತರು ಸಹಾಯಧನದಡಿ ಸವಲತ್ತನ್ನು ಪಡೆಯಲು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ-ಪಹಣಿ/ಹಿಡುವಳಿ ಪತ್ರ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಿಗೆ ಜಾತಿ ಪ್ರಮಾಣ ಪತ್ರ. ಮೊಬೈಲ್ ಸಂಖ್ಯೆ, ಚೆಕ್ಕುಬಂದಿ, ನೀರಿನ ಲಭ್ಯತೆ ಪ್ರಮಾಣ ಪತ್ರ ಆಧಾರ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ತೋಟಗಾರಿಕೆ/ರೇಷ್ಮೆ ಇಲಾಖೆಯಿಂದ ಸಹಾಯಧನ ಪಡೆದಿರುವುದಿಲ್ಲ ಎಂಬ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ.ಕೋಡ್ ಸಂಖ್ಯೆ, 100/- ರೂ ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಸಲ್ಲಿಸುವುದು.

ಸೂಕ್ಷ್ಮ ನೀರಾವರಿ ಘಟಕಗಳನ್ನು ಕೃಷಿಗೆ ಮಾತ್ರ ಉಪಯೋಗಿಸಲಾಗುವುದು ಎಂದು ರೈತರು ಘೋಷಣಾ ಪತ್ರ ನೀಡಬೇಕು. ರೈತರು ಕಡ್ಡಾಯವಾಗಿ FID ಹೊಂದಿರತಕ್ಕದ್ದು.

ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕಗಳನ್ನು ಪಡೆಯಲು ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

23 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago