ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ನೀರಿನ ಮಿತಿ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಜಿಲ್ಲೆಯಲ್ಲಿ ಲಘು ನೀರಾವರಿ ಪದ್ಧತಿಯನ್ನು ಜನಪ್ರಿಯಗೊಳಿಸಲು ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತೆ ಸೂಕ್ಷ್ಮ ನೀರಾವರಿ (ಹನಿ ನೀರಾವರಿ ಮತ್ತು ತುಂತುರು ನೀರಾವರಿ) ಘಟಕಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಕೃಷಿ ಇಲಾಖೆಯಿಂದ ಶೇ.90ರ ರಿಯಾಯಿತಿಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಸೌಲಭ್ಯ ಪಡೆಯಲು ಷರತ್ತುಗಳು*
ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 5.0 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ. ಮೊದಲ ಎರಡು ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಸಹಾಯಧನ ಮತ್ತು ಎರಡು ಹೆಕ್ಟೇರ್ ಗಿಂತ ಮೇಲ್ಪಟ್ಟು 5.0 ಹೆಕ್ಟೇರ್ ವರೆಗೆ ಶೇ.45 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ ರೈತರಿಗೆ ಮತ್ತು ಶೇ.55 ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ನೀಡಲು ಅವಕಾಶವಿದೆ.

ಸರ್ಕಾರದಿಂದ ಅನುಮೋದನೆಗೊಂಡಿರುವ ಸಂಸ್ಥೆಗಳಿಂದ ಘಟಕಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಸಹಾಯಧನ ದೊರೆಯುತ್ತದೆ.

ಸೂಕ್ಷ್ಮ ನೀರಾವರಿ ಘಟಕವನ್ನು ಸಹಾಯಧನದಡಿ ಪಡೆಯಲು ಸಾಮಾನ್ಯ ವರ್ಗದ ರೈತರಿಗೆ ಒಮ್ಮೆ ಮಾತ್ರ ಹಾಗೂ ಪರಿಶಿಷ್ಟ ಜಾತಿ ರೈತರಿಗೆ ಏಳು ವರ್ಷಗಳಿಗೊಮ್ಮೆ ಮಾತ್ರ ಅವಕಾಶವಿರುತ್ತದೆ. ಏಳು ವರ್ಷಗಳ ಹಿಂದೆ, ಸೂಕ್ಷ್ಮನೀರಾವರಿ ಸವಲತ್ತು ಪಡೆದ ಪರಿಶಿಷ್ಟ ಜಾತಿ ರೈತರಿಗೆ ಮತ್ತೊಮ್ಮೆ ಸವಲತ್ತು ಪಡೆಯಲು ರೈತರಿಗೆ ಆದ್ಯತೆ ಮೇಲೆ ನೀಡಲಾಗುವುದು.

‌‌‌ರೈತರು ಸಹಾಯಧನದಡಿ ಸವಲತ್ತನ್ನು ಪಡೆಯಲು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ-ಪಹಣಿ/ಹಿಡುವಳಿ ಪತ್ರ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಿಗೆ ಜಾತಿ ಪ್ರಮಾಣ ಪತ್ರ. ಮೊಬೈಲ್ ಸಂಖ್ಯೆ, ಚೆಕ್ಕುಬಂದಿ, ನೀರಿನ ಲಭ್ಯತೆ ಪ್ರಮಾಣ ಪತ್ರ ಆಧಾರ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ತೋಟಗಾರಿಕೆ/ರೇಷ್ಮೆ ಇಲಾಖೆಯಿಂದ ಸಹಾಯಧನ ಪಡೆದಿರುವುದಿಲ್ಲ ಎಂಬ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ.ಕೋಡ್ ಸಂಖ್ಯೆ, 100/- ರೂ ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಸಲ್ಲಿಸುವುದು.

ಸೂಕ್ಷ್ಮ ನೀರಾವರಿ ಘಟಕಗಳನ್ನು ಕೃಷಿಗೆ ಮಾತ್ರ ಉಪಯೋಗಿಸಲಾಗುವುದು ಎಂದು ರೈತರು ಘೋಷಣಾ ಪತ್ರ ನೀಡಬೇಕು. ರೈತರು ಕಡ್ಡಾಯವಾಗಿ FID ಹೊಂದಿರತಕ್ಕದ್ದು.

ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕಗಳನ್ನು ಪಡೆಯಲು ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

19 minutes ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

23 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago