ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ನೀರಿನ ಮಿತಿ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಜಿಲ್ಲೆಯಲ್ಲಿ ಲಘು ನೀರಾವರಿ ಪದ್ಧತಿಯನ್ನು ಜನಪ್ರಿಯಗೊಳಿಸಲು ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತೆ ಸೂಕ್ಷ್ಮ ನೀರಾವರಿ (ಹನಿ ನೀರಾವರಿ ಮತ್ತು ತುಂತುರು ನೀರಾವರಿ) ಘಟಕಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಕೃಷಿ ಇಲಾಖೆಯಿಂದ ಶೇ.90ರ ರಿಯಾಯಿತಿಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಸೌಲಭ್ಯ ಪಡೆಯಲು ಷರತ್ತುಗಳು*
ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 5.0 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ. ಮೊದಲ ಎರಡು ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಸಹಾಯಧನ ಮತ್ತು ಎರಡು ಹೆಕ್ಟೇರ್ ಗಿಂತ ಮೇಲ್ಪಟ್ಟು 5.0 ಹೆಕ್ಟೇರ್ ವರೆಗೆ ಶೇ.45 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ ರೈತರಿಗೆ ಮತ್ತು ಶೇ.55 ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ನೀಡಲು ಅವಕಾಶವಿದೆ.

ಸರ್ಕಾರದಿಂದ ಅನುಮೋದನೆಗೊಂಡಿರುವ ಸಂಸ್ಥೆಗಳಿಂದ ಘಟಕಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಸಹಾಯಧನ ದೊರೆಯುತ್ತದೆ.

ಸೂಕ್ಷ್ಮ ನೀರಾವರಿ ಘಟಕವನ್ನು ಸಹಾಯಧನದಡಿ ಪಡೆಯಲು ಸಾಮಾನ್ಯ ವರ್ಗದ ರೈತರಿಗೆ ಒಮ್ಮೆ ಮಾತ್ರ ಹಾಗೂ ಪರಿಶಿಷ್ಟ ಜಾತಿ ರೈತರಿಗೆ ಏಳು ವರ್ಷಗಳಿಗೊಮ್ಮೆ ಮಾತ್ರ ಅವಕಾಶವಿರುತ್ತದೆ. ಏಳು ವರ್ಷಗಳ ಹಿಂದೆ, ಸೂಕ್ಷ್ಮನೀರಾವರಿ ಸವಲತ್ತು ಪಡೆದ ಪರಿಶಿಷ್ಟ ಜಾತಿ ರೈತರಿಗೆ ಮತ್ತೊಮ್ಮೆ ಸವಲತ್ತು ಪಡೆಯಲು ರೈತರಿಗೆ ಆದ್ಯತೆ ಮೇಲೆ ನೀಡಲಾಗುವುದು.

‌‌‌ರೈತರು ಸಹಾಯಧನದಡಿ ಸವಲತ್ತನ್ನು ಪಡೆಯಲು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ-ಪಹಣಿ/ಹಿಡುವಳಿ ಪತ್ರ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಿಗೆ ಜಾತಿ ಪ್ರಮಾಣ ಪತ್ರ. ಮೊಬೈಲ್ ಸಂಖ್ಯೆ, ಚೆಕ್ಕುಬಂದಿ, ನೀರಿನ ಲಭ್ಯತೆ ಪ್ರಮಾಣ ಪತ್ರ ಆಧಾರ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ತೋಟಗಾರಿಕೆ/ರೇಷ್ಮೆ ಇಲಾಖೆಯಿಂದ ಸಹಾಯಧನ ಪಡೆದಿರುವುದಿಲ್ಲ ಎಂಬ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ.ಕೋಡ್ ಸಂಖ್ಯೆ, 100/- ರೂ ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಸಲ್ಲಿಸುವುದು.

ಸೂಕ್ಷ್ಮ ನೀರಾವರಿ ಘಟಕಗಳನ್ನು ಕೃಷಿಗೆ ಮಾತ್ರ ಉಪಯೋಗಿಸಲಾಗುವುದು ಎಂದು ರೈತರು ಘೋಷಣಾ ಪತ್ರ ನೀಡಬೇಕು. ರೈತರು ಕಡ್ಡಾಯವಾಗಿ FID ಹೊಂದಿರತಕ್ಕದ್ದು.

ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕಗಳನ್ನು ಪಡೆಯಲು ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

45 minutes ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

12 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

13 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

14 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

16 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

22 hours ago