ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ನೀರಿನ ಮಿತಿ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಜಿಲ್ಲೆಯಲ್ಲಿ ಲಘು ನೀರಾವರಿ ಪದ್ಧತಿಯನ್ನು ಜನಪ್ರಿಯಗೊಳಿಸಲು ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತೆ ಸೂಕ್ಷ್ಮ ನೀರಾವರಿ (ಹನಿ ನೀರಾವರಿ ಮತ್ತು ತುಂತುರು ನೀರಾವರಿ) ಘಟಕಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಕೃಷಿ ಇಲಾಖೆಯಿಂದ ಶೇ.90ರ ರಿಯಾಯಿತಿಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಸೌಲಭ್ಯ ಪಡೆಯಲು ಷರತ್ತುಗಳು*
ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 5.0 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ. ಮೊದಲ ಎರಡು ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಸಹಾಯಧನ ಮತ್ತು ಎರಡು ಹೆಕ್ಟೇರ್ ಗಿಂತ ಮೇಲ್ಪಟ್ಟು 5.0 ಹೆಕ್ಟೇರ್ ವರೆಗೆ ಶೇ.45 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ ರೈತರಿಗೆ ಮತ್ತು ಶೇ.55 ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ನೀಡಲು ಅವಕಾಶವಿದೆ.

ಸರ್ಕಾರದಿಂದ ಅನುಮೋದನೆಗೊಂಡಿರುವ ಸಂಸ್ಥೆಗಳಿಂದ ಘಟಕಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಸಹಾಯಧನ ದೊರೆಯುತ್ತದೆ.

ಸೂಕ್ಷ್ಮ ನೀರಾವರಿ ಘಟಕವನ್ನು ಸಹಾಯಧನದಡಿ ಪಡೆಯಲು ಸಾಮಾನ್ಯ ವರ್ಗದ ರೈತರಿಗೆ ಒಮ್ಮೆ ಮಾತ್ರ ಹಾಗೂ ಪರಿಶಿಷ್ಟ ಜಾತಿ ರೈತರಿಗೆ ಏಳು ವರ್ಷಗಳಿಗೊಮ್ಮೆ ಮಾತ್ರ ಅವಕಾಶವಿರುತ್ತದೆ. ಏಳು ವರ್ಷಗಳ ಹಿಂದೆ, ಸೂಕ್ಷ್ಮನೀರಾವರಿ ಸವಲತ್ತು ಪಡೆದ ಪರಿಶಿಷ್ಟ ಜಾತಿ ರೈತರಿಗೆ ಮತ್ತೊಮ್ಮೆ ಸವಲತ್ತು ಪಡೆಯಲು ರೈತರಿಗೆ ಆದ್ಯತೆ ಮೇಲೆ ನೀಡಲಾಗುವುದು.

‌‌‌ರೈತರು ಸಹಾಯಧನದಡಿ ಸವಲತ್ತನ್ನು ಪಡೆಯಲು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ-ಪಹಣಿ/ಹಿಡುವಳಿ ಪತ್ರ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಿಗೆ ಜಾತಿ ಪ್ರಮಾಣ ಪತ್ರ. ಮೊಬೈಲ್ ಸಂಖ್ಯೆ, ಚೆಕ್ಕುಬಂದಿ, ನೀರಿನ ಲಭ್ಯತೆ ಪ್ರಮಾಣ ಪತ್ರ ಆಧಾರ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ತೋಟಗಾರಿಕೆ/ರೇಷ್ಮೆ ಇಲಾಖೆಯಿಂದ ಸಹಾಯಧನ ಪಡೆದಿರುವುದಿಲ್ಲ ಎಂಬ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ.ಕೋಡ್ ಸಂಖ್ಯೆ, 100/- ರೂ ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಸಲ್ಲಿಸುವುದು.

ಸೂಕ್ಷ್ಮ ನೀರಾವರಿ ಘಟಕಗಳನ್ನು ಕೃಷಿಗೆ ಮಾತ್ರ ಉಪಯೋಗಿಸಲಾಗುವುದು ಎಂದು ರೈತರು ಘೋಷಣಾ ಪತ್ರ ನೀಡಬೇಕು. ರೈತರು ಕಡ್ಡಾಯವಾಗಿ FID ಹೊಂದಿರತಕ್ಕದ್ದು.

ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕಗಳನ್ನು ಪಡೆಯಲು ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago