ಸೂರು ಕಳೆದಕೊಂಡ ಬಡ ಕುಟುಂಬ: ಬೀದಿಗೆ ಬಂದ ತಾಯಿ ಮತ್ತು ಮಕ್ಕಳು: ಅಧಿಕಾರಿಗಳು, ಜನಪ್ರತಿನಿಧಿಗಳ ಅಸಡ್ಡೆ

ಮೊದಲೇ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಆ ಬಡ ಕುಟುಂಬಕ್ಕೆ ಸಮಸ್ಯೆ ಮೇಲೆ ಸಮಸ್ಯೆ, ಇದೆಲ್ಲದರ ಜೊತೆಗೆ ಮತ್ತೊಂದು ದೊಡ್ಡ ಸಮಸ್ಯೆ ಸಿಡಿಲು ಬಡಿದಂತೆ ಎದುರಾಗಿ‌ ಸಂಪೂರ್ಣವಾಗಿ ಬೀದಿಗೆ ಬರುವಂತಾಗಿದೆ.

ಸರಕಾರ ಬಡತನ ನಿರ್ಮೂಲನೆ ಮಾಡಬೇಕು, ಯಾರೂ ಸೂರು ಇಲ್ಲದೆ ಬೀದಿಯಲ್ಲಿ ವಾಸ ಮಾಡಬಾರದು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾರೂ ಕೂಡ ಹಸಿವಿನಿಂದ ಮಲಗಬಾರದು ಎಂಬ ಸದುದ್ದೇಶದಿಂದ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಆದರೆ, ಇಲ್ಲೊಂದು ಕಡು ಬಡ ಕುಟುಂಬ ಮಕ್ಕಳಿಗೆ ಒಂದು ಹೊತ್ತು ಊಟ ಹಾಕಲು ಪರದಾಡುತ್ತಿರುವ ಸಮಯದಲ್ಲಿ, ವಾಸ ಮಾಡಲು ಇದ್ದ ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿದೆ. ಕಷ್ಟನೋ ಸುಖನೋ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದ ಮಹಿಳೆಯನ್ನು ಆ ಒಂದು ದಿನ ಏಕಾಏಕಿ ಬೀದಿಗೆ ನಿಲ್ಲುವಂತೆ ಮಾಡಿದೆ. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು ಅಂತಿರಾ ಈ ಸ್ಟೋರಿ ಒಮ್ಮೆ ಓದಿ….

ಹೌದು, ಹೀಗೆ ಸುಟ್ಟ ಮನೆ, ಮಾಸಿದ ಹಳೇ ಬಟ್ಟೆಯಲ್ಲೇ ನಿಂತಿರುವ ಮಕ್ಕಳು, ಮಕ್ಕಳಿಗೆ ಹೊಟ್ಟೆ ತುಂಬಾ ಊಟ ಹಾಕಲು ಆಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿರುವ ಮಹಿಳೆ, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪಂಚಾಯತಿಯ ಭಕ್ತರಹಳ್ಳಿ ಗ್ರಾಮದಲ್ಲಿ. ಲಿಲಿತಾ ಬಾಯಿ ಎಂಬ ದಲಿತ ಮಹಿಳೆ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದರು. 3 ಹೆಣ್ಣು ಮಕ್ಕಳು, 2 ಗಂಡು ಮಕ್ಕಳು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಅನಾರೋಗ್ಯದಿಂದ ಗಂಡ ತೀರಿಕೊಂಡಿದ್ದಾನೆ. ಇದ್ದ ಒಂದು‌ ಮನೆಯಲ್ಲಿ ಮಕ್ಕಳನ್ನು‌ ಸಾಕಿಕೊಂಡಿದ್ದಳು ಆ ಮಹಿಳೆ.

ಎಂದಿನಂತೆ ಬೆಳಗ್ಗೆ ಎದ್ದು ಕೂಲಿಗೆ ಹೋಗಿದ್ದಾಳೆ. ಮಕ್ಕಳು ಮಧ್ಯಾಹ್ನದ ಬಿಸಿ ಊಟ ತಿನ್ನಲು ಶಾಲೆ ಬಳಿ ತೆರಳಿದ್ದರು. ಸಂಜೆ ಕೂಲಿ ಮುಗಿಸಿ ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಇದ್ದ ರಾಗಿ, ಅಕ್ಕಿ, ಅಡುಗೆ ಸಾಮಗ್ರಿಗಳ ಜೊತೆಯಲ್ಲಿ ಬೀರು, ಚೇರ್ ಎಲ್ಲವೂ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿ ಆಗಿವೆ.

ಬೆಂಕಿ ಸಂಪೂರ್ಣವಾಗಿ ಮನೆಯ ತುಂಬೆಲ್ಲಾ ಆವರಿಸಿದ ಕಾರಣ, ಎಂಚಿಗೆ ಹಾಕಿದ್ದ ಮರದ ದಿಮ್ಮಿಗಳೂ ಕೂಡ ಸಂಪೂರ್ಣವಾಗಿ ಬೆಂದುಹೋಗಿವೆ. ಅಲ್ಲದೆ ಸಂಪೂರ್ಣವಾಗಿ ಬಟ್ಟೆ ಇಡುವ ಪೆಟ್ಟಿಗೆ ನಾಶವಾದ ಹಿನ್ನೆಲೆ ಮಕ್ಕಳಿಗೆ ಇಟ್ಟುಕೊಳ್ಳಲು ಬಟ್ಟೇ ಕೂಡ ಇಲ್ಲದಂತೆ ಆಗಿದೆ. ಮಕ್ಕಳು ಹಳೇ ಬಟ್ಟೆಯಲ್ಲಿಯೇ ಕಾಲ ಹಾಕುವಂತೆ ಆಗಿದೆ. ಹರಿದ ಬಟ್ಟೆಯಲ್ಲಿರುವ ಮಕ್ಕಳಿಗೆ ಒಂದು ಜೊತೆ ಬಟ್ಟೆಯನ್ನೂ ಕೊಡಿಸಲು ಆಗದ ಸ್ಥಿತಿಯಲ್ಲಿ ತಾಯಿ ಇದ್ದಾಳೆ. ಅಡುಗೆ ಮಾಡಿಕೊಳ್ಳಲು ಯಾವ ಪಾತ್ರೆ ಸಮಾನುಗಳು‌ ಇಲ್ಲದೇ ಇರುವುದರಿಂದ ಗ್ರಾಮದಲ್ಲೇ ಇರುವ ಅನಾಥ ಆಶ್ರಮದಲ್ಲಿ ಎರಡು ಹೊತ್ತು ಊಟ ಮಾಡಿ ಮಲಗುವಂತಾಗಿದೆ. ಘಟನೆ ನಡೆದು ಹಲವು ದಿನಗಳು ಆದರೂ ಕೂಡ ನಮಗೂ ಇದಕ್ಕೂ ಸಂಬಂಧ ಇಲ್ಲ ಎಂಬಂತೆ ಅಧಿಕಾರಿಗಳು, ಚುನಾವಣೆ ಮುಗಿಯಿತು ಎಂದು ರಾಜಕಾರಣಿಗಳು ಅಸಡ್ಡೆ ತೋರುತ್ತಿದ್ದಾರೆ.

ಒಟ್ಟಾರೆ, ಕೂಲಿ ನಾಲಿ ಮಾಡಿ ಮಕ್ಕಳಿಗೆ ಮೂರು ಹೊತ್ತು ಹೊಟ್ಟೆ ತುಂಬಾ ಊಟ ಹಾಕುತ್ತಿದ್ದ ಮಹಿಳೆ ಈಗ ಒಂದು ಹೊತ್ತಿನ ಊಟಕ್ಕಾಗಿ ಅಲೆಯುತ್ತಿದ್ದಾಳೆ.‌ ಸೂರು ಇಲ್ಲದೆ ಬೀದಿಗೆ ಬಂದಿದ್ದಾರೆ. ಇನ್ನಾದರೂ ಯಾರಾದರೂ ಆ ಮಹಿಳೆಯ ಕಷ್ಟಕ್ಕೆ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

8 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

11 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

12 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

23 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago