ಮೊದಲೇ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಆ ಬಡ ಕುಟುಂಬಕ್ಕೆ ಸಮಸ್ಯೆ ಮೇಲೆ ಸಮಸ್ಯೆ, ಇದೆಲ್ಲದರ ಜೊತೆಗೆ ಮತ್ತೊಂದು ದೊಡ್ಡ ಸಮಸ್ಯೆ ಸಿಡಿಲು ಬಡಿದಂತೆ ಎದುರಾಗಿ ಸಂಪೂರ್ಣವಾಗಿ ಬೀದಿಗೆ ಬರುವಂತಾಗಿದೆ.
ಸರಕಾರ ಬಡತನ ನಿರ್ಮೂಲನೆ ಮಾಡಬೇಕು, ಯಾರೂ ಸೂರು ಇಲ್ಲದೆ ಬೀದಿಯಲ್ಲಿ ವಾಸ ಮಾಡಬಾರದು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾರೂ ಕೂಡ ಹಸಿವಿನಿಂದ ಮಲಗಬಾರದು ಎಂಬ ಸದುದ್ದೇಶದಿಂದ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಆದರೆ, ಇಲ್ಲೊಂದು ಕಡು ಬಡ ಕುಟುಂಬ ಮಕ್ಕಳಿಗೆ ಒಂದು ಹೊತ್ತು ಊಟ ಹಾಕಲು ಪರದಾಡುತ್ತಿರುವ ಸಮಯದಲ್ಲಿ, ವಾಸ ಮಾಡಲು ಇದ್ದ ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿದೆ. ಕಷ್ಟನೋ ಸುಖನೋ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದ ಮಹಿಳೆಯನ್ನು ಆ ಒಂದು ದಿನ ಏಕಾಏಕಿ ಬೀದಿಗೆ ನಿಲ್ಲುವಂತೆ ಮಾಡಿದೆ. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು ಅಂತಿರಾ ಈ ಸ್ಟೋರಿ ಒಮ್ಮೆ ಓದಿ….
ಎಂದಿನಂತೆ ಬೆಳಗ್ಗೆ ಎದ್ದು ಕೂಲಿಗೆ ಹೋಗಿದ್ದಾಳೆ. ಮಕ್ಕಳು ಮಧ್ಯಾಹ್ನದ ಬಿಸಿ ಊಟ ತಿನ್ನಲು ಶಾಲೆ ಬಳಿ ತೆರಳಿದ್ದರು. ಸಂಜೆ ಕೂಲಿ ಮುಗಿಸಿ ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಇದ್ದ ರಾಗಿ, ಅಕ್ಕಿ, ಅಡುಗೆ ಸಾಮಗ್ರಿಗಳ ಜೊತೆಯಲ್ಲಿ ಬೀರು, ಚೇರ್ ಎಲ್ಲವೂ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿ ಆಗಿವೆ.
ಒಟ್ಟಾರೆ, ಕೂಲಿ ನಾಲಿ ಮಾಡಿ ಮಕ್ಕಳಿಗೆ ಮೂರು ಹೊತ್ತು ಹೊಟ್ಟೆ ತುಂಬಾ ಊಟ ಹಾಕುತ್ತಿದ್ದ ಮಹಿಳೆ ಈಗ ಒಂದು ಹೊತ್ತಿನ ಊಟಕ್ಕಾಗಿ ಅಲೆಯುತ್ತಿದ್ದಾಳೆ. ಸೂರು ಇಲ್ಲದೆ ಬೀದಿಗೆ ಬಂದಿದ್ದಾರೆ. ಇನ್ನಾದರೂ ಯಾರಾದರೂ ಆ ಮಹಿಳೆಯ ಕಷ್ಟಕ್ಕೆ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…