ಮೊದಲೇ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಆ ಬಡ ಕುಟುಂಬಕ್ಕೆ ಸಮಸ್ಯೆ ಮೇಲೆ ಸಮಸ್ಯೆ, ಇದೆಲ್ಲದರ ಜೊತೆಗೆ ಮತ್ತೊಂದು ದೊಡ್ಡ ಸಮಸ್ಯೆ ಸಿಡಿಲು ಬಡಿದಂತೆ ಎದುರಾಗಿ ಸಂಪೂರ್ಣವಾಗಿ ಬೀದಿಗೆ ಬರುವಂತಾಗಿದೆ.
ಸರಕಾರ ಬಡತನ ನಿರ್ಮೂಲನೆ ಮಾಡಬೇಕು, ಯಾರೂ ಸೂರು ಇಲ್ಲದೆ ಬೀದಿಯಲ್ಲಿ ವಾಸ ಮಾಡಬಾರದು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾರೂ ಕೂಡ ಹಸಿವಿನಿಂದ ಮಲಗಬಾರದು ಎಂಬ ಸದುದ್ದೇಶದಿಂದ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಆದರೆ, ಇಲ್ಲೊಂದು ಕಡು ಬಡ ಕುಟುಂಬ ಮಕ್ಕಳಿಗೆ ಒಂದು ಹೊತ್ತು ಊಟ ಹಾಕಲು ಪರದಾಡುತ್ತಿರುವ ಸಮಯದಲ್ಲಿ, ವಾಸ ಮಾಡಲು ಇದ್ದ ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿದೆ. ಕಷ್ಟನೋ ಸುಖನೋ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದ ಮಹಿಳೆಯನ್ನು ಆ ಒಂದು ದಿನ ಏಕಾಏಕಿ ಬೀದಿಗೆ ನಿಲ್ಲುವಂತೆ ಮಾಡಿದೆ. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು ಅಂತಿರಾ ಈ ಸ್ಟೋರಿ ಒಮ್ಮೆ ಓದಿ….
ಎಂದಿನಂತೆ ಬೆಳಗ್ಗೆ ಎದ್ದು ಕೂಲಿಗೆ ಹೋಗಿದ್ದಾಳೆ. ಮಕ್ಕಳು ಮಧ್ಯಾಹ್ನದ ಬಿಸಿ ಊಟ ತಿನ್ನಲು ಶಾಲೆ ಬಳಿ ತೆರಳಿದ್ದರು. ಸಂಜೆ ಕೂಲಿ ಮುಗಿಸಿ ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಇದ್ದ ರಾಗಿ, ಅಕ್ಕಿ, ಅಡುಗೆ ಸಾಮಗ್ರಿಗಳ ಜೊತೆಯಲ್ಲಿ ಬೀರು, ಚೇರ್ ಎಲ್ಲವೂ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿ ಆಗಿವೆ.
ಒಟ್ಟಾರೆ, ಕೂಲಿ ನಾಲಿ ಮಾಡಿ ಮಕ್ಕಳಿಗೆ ಮೂರು ಹೊತ್ತು ಹೊಟ್ಟೆ ತುಂಬಾ ಊಟ ಹಾಕುತ್ತಿದ್ದ ಮಹಿಳೆ ಈಗ ಒಂದು ಹೊತ್ತಿನ ಊಟಕ್ಕಾಗಿ ಅಲೆಯುತ್ತಿದ್ದಾಳೆ. ಸೂರು ಇಲ್ಲದೆ ಬೀದಿಗೆ ಬಂದಿದ್ದಾರೆ. ಇನ್ನಾದರೂ ಯಾರಾದರೂ ಆ ಮಹಿಳೆಯ ಕಷ್ಟಕ್ಕೆ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…