ಸೂರು ಕಳೆದಕೊಂಡ ಬಡ ಕುಟುಂಬ: ಬೀದಿಗೆ ಬಂದ ತಾಯಿ ಮತ್ತು ಮಕ್ಕಳು: ಅಧಿಕಾರಿಗಳು, ಜನಪ್ರತಿನಿಧಿಗಳ ಅಸಡ್ಡೆ

ಮೊದಲೇ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಆ ಬಡ ಕುಟುಂಬಕ್ಕೆ ಸಮಸ್ಯೆ ಮೇಲೆ ಸಮಸ್ಯೆ, ಇದೆಲ್ಲದರ ಜೊತೆಗೆ ಮತ್ತೊಂದು ದೊಡ್ಡ ಸಮಸ್ಯೆ ಸಿಡಿಲು ಬಡಿದಂತೆ ಎದುರಾಗಿ‌ ಸಂಪೂರ್ಣವಾಗಿ ಬೀದಿಗೆ ಬರುವಂತಾಗಿದೆ.

ಸರಕಾರ ಬಡತನ ನಿರ್ಮೂಲನೆ ಮಾಡಬೇಕು, ಯಾರೂ ಸೂರು ಇಲ್ಲದೆ ಬೀದಿಯಲ್ಲಿ ವಾಸ ಮಾಡಬಾರದು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾರೂ ಕೂಡ ಹಸಿವಿನಿಂದ ಮಲಗಬಾರದು ಎಂಬ ಸದುದ್ದೇಶದಿಂದ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಆದರೆ, ಇಲ್ಲೊಂದು ಕಡು ಬಡ ಕುಟುಂಬ ಮಕ್ಕಳಿಗೆ ಒಂದು ಹೊತ್ತು ಊಟ ಹಾಕಲು ಪರದಾಡುತ್ತಿರುವ ಸಮಯದಲ್ಲಿ, ವಾಸ ಮಾಡಲು ಇದ್ದ ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿದೆ. ಕಷ್ಟನೋ ಸುಖನೋ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದ ಮಹಿಳೆಯನ್ನು ಆ ಒಂದು ದಿನ ಏಕಾಏಕಿ ಬೀದಿಗೆ ನಿಲ್ಲುವಂತೆ ಮಾಡಿದೆ. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು ಅಂತಿರಾ ಈ ಸ್ಟೋರಿ ಒಮ್ಮೆ ಓದಿ….

ಹೌದು, ಹೀಗೆ ಸುಟ್ಟ ಮನೆ, ಮಾಸಿದ ಹಳೇ ಬಟ್ಟೆಯಲ್ಲೇ ನಿಂತಿರುವ ಮಕ್ಕಳು, ಮಕ್ಕಳಿಗೆ ಹೊಟ್ಟೆ ತುಂಬಾ ಊಟ ಹಾಕಲು ಆಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿರುವ ಮಹಿಳೆ, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪಂಚಾಯತಿಯ ಭಕ್ತರಹಳ್ಳಿ ಗ್ರಾಮದಲ್ಲಿ. ಲಿಲಿತಾ ಬಾಯಿ ಎಂಬ ದಲಿತ ಮಹಿಳೆ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದರು. 3 ಹೆಣ್ಣು ಮಕ್ಕಳು, 2 ಗಂಡು ಮಕ್ಕಳು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಅನಾರೋಗ್ಯದಿಂದ ಗಂಡ ತೀರಿಕೊಂಡಿದ್ದಾನೆ. ಇದ್ದ ಒಂದು‌ ಮನೆಯಲ್ಲಿ ಮಕ್ಕಳನ್ನು‌ ಸಾಕಿಕೊಂಡಿದ್ದಳು ಆ ಮಹಿಳೆ.

ಎಂದಿನಂತೆ ಬೆಳಗ್ಗೆ ಎದ್ದು ಕೂಲಿಗೆ ಹೋಗಿದ್ದಾಳೆ. ಮಕ್ಕಳು ಮಧ್ಯಾಹ್ನದ ಬಿಸಿ ಊಟ ತಿನ್ನಲು ಶಾಲೆ ಬಳಿ ತೆರಳಿದ್ದರು. ಸಂಜೆ ಕೂಲಿ ಮುಗಿಸಿ ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಇದ್ದ ರಾಗಿ, ಅಕ್ಕಿ, ಅಡುಗೆ ಸಾಮಗ್ರಿಗಳ ಜೊತೆಯಲ್ಲಿ ಬೀರು, ಚೇರ್ ಎಲ್ಲವೂ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿ ಆಗಿವೆ.

ಬೆಂಕಿ ಸಂಪೂರ್ಣವಾಗಿ ಮನೆಯ ತುಂಬೆಲ್ಲಾ ಆವರಿಸಿದ ಕಾರಣ, ಎಂಚಿಗೆ ಹಾಕಿದ್ದ ಮರದ ದಿಮ್ಮಿಗಳೂ ಕೂಡ ಸಂಪೂರ್ಣವಾಗಿ ಬೆಂದುಹೋಗಿವೆ. ಅಲ್ಲದೆ ಸಂಪೂರ್ಣವಾಗಿ ಬಟ್ಟೆ ಇಡುವ ಪೆಟ್ಟಿಗೆ ನಾಶವಾದ ಹಿನ್ನೆಲೆ ಮಕ್ಕಳಿಗೆ ಇಟ್ಟುಕೊಳ್ಳಲು ಬಟ್ಟೇ ಕೂಡ ಇಲ್ಲದಂತೆ ಆಗಿದೆ. ಮಕ್ಕಳು ಹಳೇ ಬಟ್ಟೆಯಲ್ಲಿಯೇ ಕಾಲ ಹಾಕುವಂತೆ ಆಗಿದೆ. ಹರಿದ ಬಟ್ಟೆಯಲ್ಲಿರುವ ಮಕ್ಕಳಿಗೆ ಒಂದು ಜೊತೆ ಬಟ್ಟೆಯನ್ನೂ ಕೊಡಿಸಲು ಆಗದ ಸ್ಥಿತಿಯಲ್ಲಿ ತಾಯಿ ಇದ್ದಾಳೆ. ಅಡುಗೆ ಮಾಡಿಕೊಳ್ಳಲು ಯಾವ ಪಾತ್ರೆ ಸಮಾನುಗಳು‌ ಇಲ್ಲದೇ ಇರುವುದರಿಂದ ಗ್ರಾಮದಲ್ಲೇ ಇರುವ ಅನಾಥ ಆಶ್ರಮದಲ್ಲಿ ಎರಡು ಹೊತ್ತು ಊಟ ಮಾಡಿ ಮಲಗುವಂತಾಗಿದೆ. ಘಟನೆ ನಡೆದು ಹಲವು ದಿನಗಳು ಆದರೂ ಕೂಡ ನಮಗೂ ಇದಕ್ಕೂ ಸಂಬಂಧ ಇಲ್ಲ ಎಂಬಂತೆ ಅಧಿಕಾರಿಗಳು, ಚುನಾವಣೆ ಮುಗಿಯಿತು ಎಂದು ರಾಜಕಾರಣಿಗಳು ಅಸಡ್ಡೆ ತೋರುತ್ತಿದ್ದಾರೆ.

ಒಟ್ಟಾರೆ, ಕೂಲಿ ನಾಲಿ ಮಾಡಿ ಮಕ್ಕಳಿಗೆ ಮೂರು ಹೊತ್ತು ಹೊಟ್ಟೆ ತುಂಬಾ ಊಟ ಹಾಕುತ್ತಿದ್ದ ಮಹಿಳೆ ಈಗ ಒಂದು ಹೊತ್ತಿನ ಊಟಕ್ಕಾಗಿ ಅಲೆಯುತ್ತಿದ್ದಾಳೆ.‌ ಸೂರು ಇಲ್ಲದೆ ಬೀದಿಗೆ ಬಂದಿದ್ದಾರೆ. ಇನ್ನಾದರೂ ಯಾರಾದರೂ ಆ ಮಹಿಳೆಯ ಕಷ್ಟಕ್ಕೆ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

7 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

13 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

16 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

20 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago