ಮೊದಲೇ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಆ ಬಡ ಕುಟುಂಬಕ್ಕೆ ಸಮಸ್ಯೆ ಮೇಲೆ ಸಮಸ್ಯೆ, ಇದೆಲ್ಲದರ ಜೊತೆಗೆ ಮತ್ತೊಂದು ದೊಡ್ಡ ಸಮಸ್ಯೆ ಸಿಡಿಲು ಬಡಿದಂತೆ ಎದುರಾಗಿ ಸಂಪೂರ್ಣವಾಗಿ ಬೀದಿಗೆ ಬರುವಂತಾಗಿದೆ.
ಸರಕಾರ ಬಡತನ ನಿರ್ಮೂಲನೆ ಮಾಡಬೇಕು, ಯಾರೂ ಸೂರು ಇಲ್ಲದೆ ಬೀದಿಯಲ್ಲಿ ವಾಸ ಮಾಡಬಾರದು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾರೂ ಕೂಡ ಹಸಿವಿನಿಂದ ಮಲಗಬಾರದು ಎಂಬ ಸದುದ್ದೇಶದಿಂದ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಆದರೆ, ಇಲ್ಲೊಂದು ಕಡು ಬಡ ಕುಟುಂಬ ಮಕ್ಕಳಿಗೆ ಒಂದು ಹೊತ್ತು ಊಟ ಹಾಕಲು ಪರದಾಡುತ್ತಿರುವ ಸಮಯದಲ್ಲಿ, ವಾಸ ಮಾಡಲು ಇದ್ದ ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿದೆ. ಕಷ್ಟನೋ ಸುಖನೋ ಕೂಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದ ಮಹಿಳೆಯನ್ನು ಆ ಒಂದು ದಿನ ಏಕಾಏಕಿ ಬೀದಿಗೆ ನಿಲ್ಲುವಂತೆ ಮಾಡಿದೆ. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು ಅಂತಿರಾ ಈ ಸ್ಟೋರಿ ಒಮ್ಮೆ ಓದಿ….
ಎಂದಿನಂತೆ ಬೆಳಗ್ಗೆ ಎದ್ದು ಕೂಲಿಗೆ ಹೋಗಿದ್ದಾಳೆ. ಮಕ್ಕಳು ಮಧ್ಯಾಹ್ನದ ಬಿಸಿ ಊಟ ತಿನ್ನಲು ಶಾಲೆ ಬಳಿ ತೆರಳಿದ್ದರು. ಸಂಜೆ ಕೂಲಿ ಮುಗಿಸಿ ಮನೆಗೆ ಬಂದು ನೋಡಿದಾಗ, ಮನೆಯಲ್ಲಿ ಇದ್ದ ರಾಗಿ, ಅಕ್ಕಿ, ಅಡುಗೆ ಸಾಮಗ್ರಿಗಳ ಜೊತೆಯಲ್ಲಿ ಬೀರು, ಚೇರ್ ಎಲ್ಲವೂ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿ ಆಗಿವೆ.
ಒಟ್ಟಾರೆ, ಕೂಲಿ ನಾಲಿ ಮಾಡಿ ಮಕ್ಕಳಿಗೆ ಮೂರು ಹೊತ್ತು ಹೊಟ್ಟೆ ತುಂಬಾ ಊಟ ಹಾಕುತ್ತಿದ್ದ ಮಹಿಳೆ ಈಗ ಒಂದು ಹೊತ್ತಿನ ಊಟಕ್ಕಾಗಿ ಅಲೆಯುತ್ತಿದ್ದಾಳೆ. ಸೂರು ಇಲ್ಲದೆ ಬೀದಿಗೆ ಬಂದಿದ್ದಾರೆ. ಇನ್ನಾದರೂ ಯಾರಾದರೂ ಆ ಮಹಿಳೆಯ ಕಷ್ಟಕ್ಕೆ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…