ಸೂರ್ಯ ಕುಮಾರ್ – ಕುಲದೀಪ್ ಮಿಂಚಿಂಗ್, ಸೌತ್ ಆಫ್ರಿಕಾ ವಿರುದ್ಧ ಟಿ-ಟ್ವೆಂಟಿ ಸರಣಿ ಸಮಬಲಗೊಳಿಸಿದ ಭಾರತ !

ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕ ಹಾಗೂ ಕುಲದೀಪ್ ಯಾದವ್ ಅವರ ಮಿಂಚಿನ ಬೌಲಿಂಗ್ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾದ ವಿರುದ್ಧ ಟಿ -ಟ್ವೆಂಟಿ ಸರಣಿಯನ್ನು ಸಮಬಲಗೊಳಿಸಿತು.

ಮೊದಲ ಪಂದ್ಯ ಮಳೆಗೆ ಆಹುತಿಯಾದರೂ ಸಹ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಗೆಲ್ಲುವ ಮೂಲಕ ಭಾರತಕ್ಕೆ ಸಂಕಷ್ಟಕ್ಕೆ ದೂಡಿತ್ತು, ಆದರೆ ಮೂರನೇ ಪಂದ್ಯವನ್ನು ಭಾರತ 106 ರನ್ ಗಳಿಂದ ಗೆದ್ದು ಬೀಗಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ (8) ನಿರಾಸೆ ಮೂಡಿಸಿದರು, ಆದರೆ ಯಶಸ್ವಿ ಜೈಸ್ವಾಲ್ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 60 ರನ್ ಗಳಿಸಿದರು.

 

ನಂತರ ಬಂದ ತಿಲಕ್ ವಮಾ೯(೦) ಹೆಚ್ಚು ಹೊತ್ತು ನಿಲ್ಲದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು, ಆದರೆ ನಾಯಕ ಸೂರ್ಯ ಕುಮಾರ್ ಯಾದವ್ ಏಳು ಬೌಂಡರಿ ಹಾಗೂ ಎಂಟು ಸಿಕ್ಸರ್ ನೆರವಿನಿಂದ (100) ಶತಕ ಸಿಡಿಸಿ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು.

ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ ಭಾರತದ ಬೌಲಿಂಗ್ ಪಡೆಯನ್ನು ಎದುರಿಸಲು ಸಾಧ್ಯವಾಗಲಿಲ್ಲ, ನಾಯಕ ಮಾಕ್ರಮ್ (25) ಹಾಗೂ ಮಿಲ್ಲರ್ (35) ಹೊರತುಪಡಿಸಿ ಉಳಿದ ಬ್ಯಾಟ್ಸ್ಮನಗಳು ರನ್ ಗಳಿಸಲು ಪರದಾಡಿದರು.

ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (5) ವಿಕೆಟ್ ಗೊಂಚಲು ಪಡೆದು ಮಿಂಚಿದರೆ, ಆಲ್ ರೌಂಡರ್ ರವೀಂದ್ರ ಜಡೇಜಾ ಎರಡು ವಿಕೆಟ್ ಹಾಗೂ ವೇಗಿಗಳಾದ ಮುಖೇಶ್ ಕುಮಾರ್ ಮತ್ತು ಅಶ೯ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಸೂರ್ಯ ಕುಮಾರ್ ಯಾದವ್ ಗೆ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

2 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

11 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

17 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

18 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago