ಸೂರ್ಯ ಕುಮಾರ್ – ಕುಲದೀಪ್ ಮಿಂಚಿಂಗ್, ಸೌತ್ ಆಫ್ರಿಕಾ ವಿರುದ್ಧ ಟಿ-ಟ್ವೆಂಟಿ ಸರಣಿ ಸಮಬಲಗೊಳಿಸಿದ ಭಾರತ !

ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕ ಹಾಗೂ ಕುಲದೀಪ್ ಯಾದವ್ ಅವರ ಮಿಂಚಿನ ಬೌಲಿಂಗ್ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾದ ವಿರುದ್ಧ ಟಿ -ಟ್ವೆಂಟಿ ಸರಣಿಯನ್ನು ಸಮಬಲಗೊಳಿಸಿತು.

ಮೊದಲ ಪಂದ್ಯ ಮಳೆಗೆ ಆಹುತಿಯಾದರೂ ಸಹ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಗೆಲ್ಲುವ ಮೂಲಕ ಭಾರತಕ್ಕೆ ಸಂಕಷ್ಟಕ್ಕೆ ದೂಡಿತ್ತು, ಆದರೆ ಮೂರನೇ ಪಂದ್ಯವನ್ನು ಭಾರತ 106 ರನ್ ಗಳಿಂದ ಗೆದ್ದು ಬೀಗಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ (8) ನಿರಾಸೆ ಮೂಡಿಸಿದರು, ಆದರೆ ಯಶಸ್ವಿ ಜೈಸ್ವಾಲ್ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 60 ರನ್ ಗಳಿಸಿದರು.

 

ನಂತರ ಬಂದ ತಿಲಕ್ ವಮಾ೯(೦) ಹೆಚ್ಚು ಹೊತ್ತು ನಿಲ್ಲದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು, ಆದರೆ ನಾಯಕ ಸೂರ್ಯ ಕುಮಾರ್ ಯಾದವ್ ಏಳು ಬೌಂಡರಿ ಹಾಗೂ ಎಂಟು ಸಿಕ್ಸರ್ ನೆರವಿನಿಂದ (100) ಶತಕ ಸಿಡಿಸಿ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು.

ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ ಭಾರತದ ಬೌಲಿಂಗ್ ಪಡೆಯನ್ನು ಎದುರಿಸಲು ಸಾಧ್ಯವಾಗಲಿಲ್ಲ, ನಾಯಕ ಮಾಕ್ರಮ್ (25) ಹಾಗೂ ಮಿಲ್ಲರ್ (35) ಹೊರತುಪಡಿಸಿ ಉಳಿದ ಬ್ಯಾಟ್ಸ್ಮನಗಳು ರನ್ ಗಳಿಸಲು ಪರದಾಡಿದರು.

ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (5) ವಿಕೆಟ್ ಗೊಂಚಲು ಪಡೆದು ಮಿಂಚಿದರೆ, ಆಲ್ ರೌಂಡರ್ ರವೀಂದ್ರ ಜಡೇಜಾ ಎರಡು ವಿಕೆಟ್ ಹಾಗೂ ವೇಗಿಗಳಾದ ಮುಖೇಶ್ ಕುಮಾರ್ ಮತ್ತು ಅಶ೯ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಸೂರ್ಯ ಕುಮಾರ್ ಯಾದವ್ ಗೆ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

7 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

8 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

21 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

21 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

21 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

22 hours ago