ಸ್ಫೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ರವರ ಚೊಚ್ಚಲ ಐಪಿಎಲ್ ಶತಕದ ನೆರವಿನಿಂದ ರೋಹಿತ್ ಬಳಗವು ಗುಜರಾತ್ ತಂಡದ ವಿರುದ್ಧ 27 ರನ್ ಗಳ ಜಯ ಸಾಧಿಸಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ದೊರೆಯಿತು. ಆದರೆ 7ನೇ ಓವರ್ ಬೌಲಿಂಗ್ ಮಾಡಿದ ರಶೀದ್ ಖಾನ್ ಕ್ರಮವಾಗಿ ರೋಹಿತ್ (29), ಇಶನ್ ಕಿಶನ್ (31) ವಿಕೆಟ್ ಪಡೆದು ಮಿಂಚಿದರು. ನಂತರ ಕ್ರಿಸ್ ಗೆ ಬಂದ ವದೆರ (15), ವಿಷ್ಣು ವಿನೋದ (30), ಟೀಮ್ ಡೇವಿಡ್ (5) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ ಆದರೆ ಸೂರ್ಯನ ಅಜೇಯ ಶತಕದ(11×4, 6×6) ನೆರವಿನಿಂದ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದರು.
219 ರನ್ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ ಕ್ರಮವಾಗಿ ಸಹಾ (2), ಶುಬ್ಮನ್ ಗಿಲ್ (6), ಹಾರ್ದಿಕ್ (4) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವಿಜಯ್ ಶಂಕರ್ (29),ಮಿಲ್ಲರ್ (41) ರನ್ ಗಳಿಸಿ ಪೆವಿಲಿಯನ್ ಸೇರಿದರು 8ನೇ ಸ್ಥಾನದಲ್ಲಿ ಬ್ಯಾಟಿಂಗ್ ಗೆ ಬಂದ ರಶೀದ್ ಖಾನ್ ಅಜೇಯ (79) ಗಳಿಸಿ ಗೆಲುವಿನ ಸನಿಹ ಬಂದರು .ಒಟ್ಟಾರೆ ಗುಜರಾತ್ ತಂಡದ 8 ವಿಕೆಟ್ ನಷ್ಟಕ್ಕೆ 191 ರನ್ ಮಾತ್ರ ಗಳಿಸಲು ಸಧ್ಯವಾಯಿತು.
ಅಜೇಯ ಶತಕ ಗಳಿಸಿದ ಸೂರ್ಯ ಕುಮಾರ್ ಯಾದವ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…