ಸ್ಫೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ರವರ ಚೊಚ್ಚಲ ಐಪಿಎಲ್ ಶತಕದ ನೆರವಿನಿಂದ ರೋಹಿತ್ ಬಳಗವು ಗುಜರಾತ್ ತಂಡದ ವಿರುದ್ಧ 27 ರನ್ ಗಳ ಜಯ ಸಾಧಿಸಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ದೊರೆಯಿತು. ಆದರೆ 7ನೇ ಓವರ್ ಬೌಲಿಂಗ್ ಮಾಡಿದ ರಶೀದ್ ಖಾನ್ ಕ್ರಮವಾಗಿ ರೋಹಿತ್ (29), ಇಶನ್ ಕಿಶನ್ (31) ವಿಕೆಟ್ ಪಡೆದು ಮಿಂಚಿದರು. ನಂತರ ಕ್ರಿಸ್ ಗೆ ಬಂದ ವದೆರ (15), ವಿಷ್ಣು ವಿನೋದ (30), ಟೀಮ್ ಡೇವಿಡ್ (5) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ ಆದರೆ ಸೂರ್ಯನ ಅಜೇಯ ಶತಕದ(11×4, 6×6) ನೆರವಿನಿಂದ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದರು.
219 ರನ್ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ ಕ್ರಮವಾಗಿ ಸಹಾ (2), ಶುಬ್ಮನ್ ಗಿಲ್ (6), ಹಾರ್ದಿಕ್ (4) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವಿಜಯ್ ಶಂಕರ್ (29),ಮಿಲ್ಲರ್ (41) ರನ್ ಗಳಿಸಿ ಪೆವಿಲಿಯನ್ ಸೇರಿದರು 8ನೇ ಸ್ಥಾನದಲ್ಲಿ ಬ್ಯಾಟಿಂಗ್ ಗೆ ಬಂದ ರಶೀದ್ ಖಾನ್ ಅಜೇಯ (79) ಗಳಿಸಿ ಗೆಲುವಿನ ಸನಿಹ ಬಂದರು .ಒಟ್ಟಾರೆ ಗುಜರಾತ್ ತಂಡದ 8 ವಿಕೆಟ್ ನಷ್ಟಕ್ಕೆ 191 ರನ್ ಮಾತ್ರ ಗಳಿಸಲು ಸಧ್ಯವಾಯಿತು.
ಅಜೇಯ ಶತಕ ಗಳಿಸಿದ ಸೂರ್ಯ ಕುಮಾರ್ ಯಾದವ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…