ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯ- ಬಿ.ಆರ್.ವಿಶ್ವನಾಥ್

ಜ್ಞಾನವೆಂಬುದು ಹರಿಯುವ ನದಿಯಂತೆ, ಛಾಯಾಗ್ರಹಣ ಎಂಬುದು ಕಲೆ ಮತ್ತು ತಂತ್ರಜ್ಞಾನವನ್ನು ಮೇಳೈಸಿಕೊಂಡಿದ್ದು, ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯವೆಂದು ಖ್ಯಾತ ಛಾಯಾಗ್ರಾಹಕ ಹಾಗೂ ಸಿನಿಮಾಟೋಗ್ರಾಫರ್ ಬಿ.ಆರ್.ವಿಶ್ವನಾಥ್ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ನಡೆದ ವಿಶ್ವ ಛಾಯಾಗ್ರಹಣದ ದಿನಾಚರಣೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಫೋಟೋಗ್ರಫಿ ಕಲೆ ಎಂಬುದು ತನ್ನನ್ನು ತಾನು ಅಭಿವ್ಯಕ್ತಿಸುವ ಮಾಧ್ಯಮವಾಗಿದ್ದು, ಇಲ್ಲಿ ಛಾಯಾಗ್ರಾಹಕನ ಭಾವನೆಗಳು ಪ್ರಕಟಗೊಳ್ಳುತ್ತವೆ ಎಂದರಲ್ಲದೆ, ನಿರಂತರತೆ ಹಾಗೂ ತಾಳ್ಮೆ ಎಂಬುದು ಈ ಕ್ಷೇತ್ರಕ್ಕೆ ಅಗತ್ಯವೆಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯೂ ಒಬ್ಬ ಛಾಯಾಗ್ರಾಹಕನಿಗೆ ಬಹಳಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರಷ್ಟೇ ವೃತ್ತಿಪರತೆಗೆ ಸವಾಲುಗಳನ್ನು ಸಹ ಸೃಷ್ಟಿಸಿವೆ ಎಂದು ಹೇಳಿದರಲ್ಲದೆ, ನಿರಂತರ ಕಲಿಕೆಯಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.

ಬದುಕು ಎಂಬುದೊಂದು ಕಾರ್ಯಾಗಾರವಿದ್ದಂತೆ, ಪ್ರತಿನಿತ್ಯ ಕಲಿಸುತ್ತಲೇ ಇರುತ್ತದೆ, ಕಲಿಯುವ ಮನಸ್ಥಿತಿಯನ್ನು ನಾವು ಹೊಂದಿರಬೇಕು ಎಂದರು ಹಾಗೂ ಶಿಬಿರಾರ್ಥಿಗಳೊಟ್ಟಿಗೆ ಸಂವಾದವನ್ನು ನಡೆಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಛಾಯಾಗ್ರಾಹಕರು ಪ್ರಸ್ತುತದ ಬದಲಾವಣೆಗಳನ್ನು ಒಪ್ಪಿಕೊಂಡು ಒಗ್ಗಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕೆಂದರಲ್ಲದೆ, ಹವ್ಯಾಸವಾಗಿ ಮಾತ್ರವಲ್ಲದೆ, ವೃತ್ತಿಯನ್ನಾಗಿ ಛಾಯಾಗ್ರಹಣದ ಕ್ಷೇತ್ರವನ್ನು ಆರಿಸಿಕೊಳ್ಳಬೇಕೆಂಬ ಮಾತನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಪನ್ಯಾಸಕರಾದ ದತ್ತಾತ್ರೇಯ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ, ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago