ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯ- ಬಿ.ಆರ್.ವಿಶ್ವನಾಥ್

ಜ್ಞಾನವೆಂಬುದು ಹರಿಯುವ ನದಿಯಂತೆ, ಛಾಯಾಗ್ರಹಣ ಎಂಬುದು ಕಲೆ ಮತ್ತು ತಂತ್ರಜ್ಞಾನವನ್ನು ಮೇಳೈಸಿಕೊಂಡಿದ್ದು, ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯವೆಂದು ಖ್ಯಾತ ಛಾಯಾಗ್ರಾಹಕ ಹಾಗೂ ಸಿನಿಮಾಟೋಗ್ರಾಫರ್ ಬಿ.ಆರ್.ವಿಶ್ವನಾಥ್ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ನಡೆದ ವಿಶ್ವ ಛಾಯಾಗ್ರಹಣದ ದಿನಾಚರಣೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಫೋಟೋಗ್ರಫಿ ಕಲೆ ಎಂಬುದು ತನ್ನನ್ನು ತಾನು ಅಭಿವ್ಯಕ್ತಿಸುವ ಮಾಧ್ಯಮವಾಗಿದ್ದು, ಇಲ್ಲಿ ಛಾಯಾಗ್ರಾಹಕನ ಭಾವನೆಗಳು ಪ್ರಕಟಗೊಳ್ಳುತ್ತವೆ ಎಂದರಲ್ಲದೆ, ನಿರಂತರತೆ ಹಾಗೂ ತಾಳ್ಮೆ ಎಂಬುದು ಈ ಕ್ಷೇತ್ರಕ್ಕೆ ಅಗತ್ಯವೆಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯೂ ಒಬ್ಬ ಛಾಯಾಗ್ರಾಹಕನಿಗೆ ಬಹಳಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರಷ್ಟೇ ವೃತ್ತಿಪರತೆಗೆ ಸವಾಲುಗಳನ್ನು ಸಹ ಸೃಷ್ಟಿಸಿವೆ ಎಂದು ಹೇಳಿದರಲ್ಲದೆ, ನಿರಂತರ ಕಲಿಕೆಯಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.

ಬದುಕು ಎಂಬುದೊಂದು ಕಾರ್ಯಾಗಾರವಿದ್ದಂತೆ, ಪ್ರತಿನಿತ್ಯ ಕಲಿಸುತ್ತಲೇ ಇರುತ್ತದೆ, ಕಲಿಯುವ ಮನಸ್ಥಿತಿಯನ್ನು ನಾವು ಹೊಂದಿರಬೇಕು ಎಂದರು ಹಾಗೂ ಶಿಬಿರಾರ್ಥಿಗಳೊಟ್ಟಿಗೆ ಸಂವಾದವನ್ನು ನಡೆಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಛಾಯಾಗ್ರಾಹಕರು ಪ್ರಸ್ತುತದ ಬದಲಾವಣೆಗಳನ್ನು ಒಪ್ಪಿಕೊಂಡು ಒಗ್ಗಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕೆಂದರಲ್ಲದೆ, ಹವ್ಯಾಸವಾಗಿ ಮಾತ್ರವಲ್ಲದೆ, ವೃತ್ತಿಯನ್ನಾಗಿ ಛಾಯಾಗ್ರಹಣದ ಕ್ಷೇತ್ರವನ್ನು ಆರಿಸಿಕೊಳ್ಳಬೇಕೆಂಬ ಮಾತನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಪನ್ಯಾಸಕರಾದ ದತ್ತಾತ್ರೇಯ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ, ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

7 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

9 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

12 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

13 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

16 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

16 hours ago