ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯ- ಬಿ.ಆರ್.ವಿಶ್ವನಾಥ್

ಜ್ಞಾನವೆಂಬುದು ಹರಿಯುವ ನದಿಯಂತೆ, ಛಾಯಾಗ್ರಹಣ ಎಂಬುದು ಕಲೆ ಮತ್ತು ತಂತ್ರಜ್ಞಾನವನ್ನು ಮೇಳೈಸಿಕೊಂಡಿದ್ದು, ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯವೆಂದು ಖ್ಯಾತ ಛಾಯಾಗ್ರಾಹಕ ಹಾಗೂ ಸಿನಿಮಾಟೋಗ್ರಾಫರ್ ಬಿ.ಆರ್.ವಿಶ್ವನಾಥ್ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ನಡೆದ ವಿಶ್ವ ಛಾಯಾಗ್ರಹಣದ ದಿನಾಚರಣೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಫೋಟೋಗ್ರಫಿ ಕಲೆ ಎಂಬುದು ತನ್ನನ್ನು ತಾನು ಅಭಿವ್ಯಕ್ತಿಸುವ ಮಾಧ್ಯಮವಾಗಿದ್ದು, ಇಲ್ಲಿ ಛಾಯಾಗ್ರಾಹಕನ ಭಾವನೆಗಳು ಪ್ರಕಟಗೊಳ್ಳುತ್ತವೆ ಎಂದರಲ್ಲದೆ, ನಿರಂತರತೆ ಹಾಗೂ ತಾಳ್ಮೆ ಎಂಬುದು ಈ ಕ್ಷೇತ್ರಕ್ಕೆ ಅಗತ್ಯವೆಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯೂ ಒಬ್ಬ ಛಾಯಾಗ್ರಾಹಕನಿಗೆ ಬಹಳಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರಷ್ಟೇ ವೃತ್ತಿಪರತೆಗೆ ಸವಾಲುಗಳನ್ನು ಸಹ ಸೃಷ್ಟಿಸಿವೆ ಎಂದು ಹೇಳಿದರಲ್ಲದೆ, ನಿರಂತರ ಕಲಿಕೆಯಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.

ಬದುಕು ಎಂಬುದೊಂದು ಕಾರ್ಯಾಗಾರವಿದ್ದಂತೆ, ಪ್ರತಿನಿತ್ಯ ಕಲಿಸುತ್ತಲೇ ಇರುತ್ತದೆ, ಕಲಿಯುವ ಮನಸ್ಥಿತಿಯನ್ನು ನಾವು ಹೊಂದಿರಬೇಕು ಎಂದರು ಹಾಗೂ ಶಿಬಿರಾರ್ಥಿಗಳೊಟ್ಟಿಗೆ ಸಂವಾದವನ್ನು ನಡೆಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಛಾಯಾಗ್ರಾಹಕರು ಪ್ರಸ್ತುತದ ಬದಲಾವಣೆಗಳನ್ನು ಒಪ್ಪಿಕೊಂಡು ಒಗ್ಗಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕೆಂದರಲ್ಲದೆ, ಹವ್ಯಾಸವಾಗಿ ಮಾತ್ರವಲ್ಲದೆ, ವೃತ್ತಿಯನ್ನಾಗಿ ಛಾಯಾಗ್ರಹಣದ ಕ್ಷೇತ್ರವನ್ನು ಆರಿಸಿಕೊಳ್ಳಬೇಕೆಂಬ ಮಾತನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಪನ್ಯಾಸಕರಾದ ದತ್ತಾತ್ರೇಯ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ, ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

Accident Update: ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು: ಮೃತರ ವಿವರ ಇಲ್ಲಿದೆ ನೋಡಿ…

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…

2 hours ago

ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ ಖದೀಮರು

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…

4 hours ago

ನಿಕ್ಷಯ ಮಿತ್ರ (Nikshay Mitra) ಕಾರ್ಯಕ್ರಮ ವೀಕ್ಷಣೆ ಹಾಗೂ ಫುಡ್ ಕಿಟ್ ವಿತರಣೆ

ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…

5 hours ago

ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರ ಮೂಲದ ಎನ್ನಲಾದ ಐವರ ಸಾವು

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ…

6 hours ago

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

21 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

24 hours ago