ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯ- ಬಿ.ಆರ್.ವಿಶ್ವನಾಥ್

ಜ್ಞಾನವೆಂಬುದು ಹರಿಯುವ ನದಿಯಂತೆ, ಛಾಯಾಗ್ರಹಣ ಎಂಬುದು ಕಲೆ ಮತ್ತು ತಂತ್ರಜ್ಞಾನವನ್ನು ಮೇಳೈಸಿಕೊಂಡಿದ್ದು, ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯವೆಂದು ಖ್ಯಾತ ಛಾಯಾಗ್ರಾಹಕ ಹಾಗೂ ಸಿನಿಮಾಟೋಗ್ರಾಫರ್ ಬಿ.ಆರ್.ವಿಶ್ವನಾಥ್ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ನಡೆದ ವಿಶ್ವ ಛಾಯಾಗ್ರಹಣದ ದಿನಾಚರಣೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಫೋಟೋಗ್ರಫಿ ಕಲೆ ಎಂಬುದು ತನ್ನನ್ನು ತಾನು ಅಭಿವ್ಯಕ್ತಿಸುವ ಮಾಧ್ಯಮವಾಗಿದ್ದು, ಇಲ್ಲಿ ಛಾಯಾಗ್ರಾಹಕನ ಭಾವನೆಗಳು ಪ್ರಕಟಗೊಳ್ಳುತ್ತವೆ ಎಂದರಲ್ಲದೆ, ನಿರಂತರತೆ ಹಾಗೂ ತಾಳ್ಮೆ ಎಂಬುದು ಈ ಕ್ಷೇತ್ರಕ್ಕೆ ಅಗತ್ಯವೆಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯೂ ಒಬ್ಬ ಛಾಯಾಗ್ರಾಹಕನಿಗೆ ಬಹಳಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರಷ್ಟೇ ವೃತ್ತಿಪರತೆಗೆ ಸವಾಲುಗಳನ್ನು ಸಹ ಸೃಷ್ಟಿಸಿವೆ ಎಂದು ಹೇಳಿದರಲ್ಲದೆ, ನಿರಂತರ ಕಲಿಕೆಯಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.

ಬದುಕು ಎಂಬುದೊಂದು ಕಾರ್ಯಾಗಾರವಿದ್ದಂತೆ, ಪ್ರತಿನಿತ್ಯ ಕಲಿಸುತ್ತಲೇ ಇರುತ್ತದೆ, ಕಲಿಯುವ ಮನಸ್ಥಿತಿಯನ್ನು ನಾವು ಹೊಂದಿರಬೇಕು ಎಂದರು ಹಾಗೂ ಶಿಬಿರಾರ್ಥಿಗಳೊಟ್ಟಿಗೆ ಸಂವಾದವನ್ನು ನಡೆಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಛಾಯಾಗ್ರಾಹಕರು ಪ್ರಸ್ತುತದ ಬದಲಾವಣೆಗಳನ್ನು ಒಪ್ಪಿಕೊಂಡು ಒಗ್ಗಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕೆಂದರಲ್ಲದೆ, ಹವ್ಯಾಸವಾಗಿ ಮಾತ್ರವಲ್ಲದೆ, ವೃತ್ತಿಯನ್ನಾಗಿ ಛಾಯಾಗ್ರಹಣದ ಕ್ಷೇತ್ರವನ್ನು ಆರಿಸಿಕೊಳ್ಳಬೇಕೆಂಬ ಮಾತನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಪನ್ಯಾಸಕರಾದ ದತ್ತಾತ್ರೇಯ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ, ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

6 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

19 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

21 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

2 days ago