ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯ- ಬಿ.ಆರ್.ವಿಶ್ವನಾಥ್

ಜ್ಞಾನವೆಂಬುದು ಹರಿಯುವ ನದಿಯಂತೆ, ಛಾಯಾಗ್ರಹಣ ಎಂಬುದು ಕಲೆ ಮತ್ತು ತಂತ್ರಜ್ಞಾನವನ್ನು ಮೇಳೈಸಿಕೊಂಡಿದ್ದು, ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯವೆಂದು ಖ್ಯಾತ ಛಾಯಾಗ್ರಾಹಕ ಹಾಗೂ ಸಿನಿಮಾಟೋಗ್ರಾಫರ್ ಬಿ.ಆರ್.ವಿಶ್ವನಾಥ್ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ನಡೆದ ವಿಶ್ವ ಛಾಯಾಗ್ರಹಣದ ದಿನಾಚರಣೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಫೋಟೋಗ್ರಫಿ ಕಲೆ ಎಂಬುದು ತನ್ನನ್ನು ತಾನು ಅಭಿವ್ಯಕ್ತಿಸುವ ಮಾಧ್ಯಮವಾಗಿದ್ದು, ಇಲ್ಲಿ ಛಾಯಾಗ್ರಾಹಕನ ಭಾವನೆಗಳು ಪ್ರಕಟಗೊಳ್ಳುತ್ತವೆ ಎಂದರಲ್ಲದೆ, ನಿರಂತರತೆ ಹಾಗೂ ತಾಳ್ಮೆ ಎಂಬುದು ಈ ಕ್ಷೇತ್ರಕ್ಕೆ ಅಗತ್ಯವೆಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯೂ ಒಬ್ಬ ಛಾಯಾಗ್ರಾಹಕನಿಗೆ ಬಹಳಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರಷ್ಟೇ ವೃತ್ತಿಪರತೆಗೆ ಸವಾಲುಗಳನ್ನು ಸಹ ಸೃಷ್ಟಿಸಿವೆ ಎಂದು ಹೇಳಿದರಲ್ಲದೆ, ನಿರಂತರ ಕಲಿಕೆಯಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.

ಬದುಕು ಎಂಬುದೊಂದು ಕಾರ್ಯಾಗಾರವಿದ್ದಂತೆ, ಪ್ರತಿನಿತ್ಯ ಕಲಿಸುತ್ತಲೇ ಇರುತ್ತದೆ, ಕಲಿಯುವ ಮನಸ್ಥಿತಿಯನ್ನು ನಾವು ಹೊಂದಿರಬೇಕು ಎಂದರು ಹಾಗೂ ಶಿಬಿರಾರ್ಥಿಗಳೊಟ್ಟಿಗೆ ಸಂವಾದವನ್ನು ನಡೆಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಛಾಯಾಗ್ರಾಹಕರು ಪ್ರಸ್ತುತದ ಬದಲಾವಣೆಗಳನ್ನು ಒಪ್ಪಿಕೊಂಡು ಒಗ್ಗಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕೆಂದರಲ್ಲದೆ, ಹವ್ಯಾಸವಾಗಿ ಮಾತ್ರವಲ್ಲದೆ, ವೃತ್ತಿಯನ್ನಾಗಿ ಛಾಯಾಗ್ರಹಣದ ಕ್ಷೇತ್ರವನ್ನು ಆರಿಸಿಕೊಳ್ಳಬೇಕೆಂಬ ಮಾತನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಪನ್ಯಾಸಕರಾದ ದತ್ತಾತ್ರೇಯ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ, ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

10 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

13 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

19 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago