ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯ- ಬಿ.ಆರ್.ವಿಶ್ವನಾಥ್

ಜ್ಞಾನವೆಂಬುದು ಹರಿಯುವ ನದಿಯಂತೆ, ಛಾಯಾಗ್ರಹಣ ಎಂಬುದು ಕಲೆ ಮತ್ತು ತಂತ್ರಜ್ಞಾನವನ್ನು ಮೇಳೈಸಿಕೊಂಡಿದ್ದು, ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯವೆಂದು ಖ್ಯಾತ ಛಾಯಾಗ್ರಾಹಕ ಹಾಗೂ ಸಿನಿಮಾಟೋಗ್ರಾಫರ್ ಬಿ.ಆರ್.ವಿಶ್ವನಾಥ್ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ನಡೆದ ವಿಶ್ವ ಛಾಯಾಗ್ರಹಣದ ದಿನಾಚರಣೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಫೋಟೋಗ್ರಫಿ ಕಲೆ ಎಂಬುದು ತನ್ನನ್ನು ತಾನು ಅಭಿವ್ಯಕ್ತಿಸುವ ಮಾಧ್ಯಮವಾಗಿದ್ದು, ಇಲ್ಲಿ ಛಾಯಾಗ್ರಾಹಕನ ಭಾವನೆಗಳು ಪ್ರಕಟಗೊಳ್ಳುತ್ತವೆ ಎಂದರಲ್ಲದೆ, ನಿರಂತರತೆ ಹಾಗೂ ತಾಳ್ಮೆ ಎಂಬುದು ಈ ಕ್ಷೇತ್ರಕ್ಕೆ ಅಗತ್ಯವೆಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯೂ ಒಬ್ಬ ಛಾಯಾಗ್ರಾಹಕನಿಗೆ ಬಹಳಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರಷ್ಟೇ ವೃತ್ತಿಪರತೆಗೆ ಸವಾಲುಗಳನ್ನು ಸಹ ಸೃಷ್ಟಿಸಿವೆ ಎಂದು ಹೇಳಿದರಲ್ಲದೆ, ನಿರಂತರ ಕಲಿಕೆಯಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.

ಬದುಕು ಎಂಬುದೊಂದು ಕಾರ್ಯಾಗಾರವಿದ್ದಂತೆ, ಪ್ರತಿನಿತ್ಯ ಕಲಿಸುತ್ತಲೇ ಇರುತ್ತದೆ, ಕಲಿಯುವ ಮನಸ್ಥಿತಿಯನ್ನು ನಾವು ಹೊಂದಿರಬೇಕು ಎಂದರು ಹಾಗೂ ಶಿಬಿರಾರ್ಥಿಗಳೊಟ್ಟಿಗೆ ಸಂವಾದವನ್ನು ನಡೆಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಛಾಯಾಗ್ರಾಹಕರು ಪ್ರಸ್ತುತದ ಬದಲಾವಣೆಗಳನ್ನು ಒಪ್ಪಿಕೊಂಡು ಒಗ್ಗಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕೆಂದರಲ್ಲದೆ, ಹವ್ಯಾಸವಾಗಿ ಮಾತ್ರವಲ್ಲದೆ, ವೃತ್ತಿಯನ್ನಾಗಿ ಛಾಯಾಗ್ರಹಣದ ಕ್ಷೇತ್ರವನ್ನು ಆರಿಸಿಕೊಳ್ಳಬೇಕೆಂಬ ಮಾತನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಪನ್ಯಾಸಕರಾದ ದತ್ತಾತ್ರೇಯ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ, ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago