ಜ್ಞಾನವೆಂಬುದು ಹರಿಯುವ ನದಿಯಂತೆ, ಛಾಯಾಗ್ರಹಣ ಎಂಬುದು ಕಲೆ ಮತ್ತು ತಂತ್ರಜ್ಞಾನವನ್ನು ಮೇಳೈಸಿಕೊಂಡಿದ್ದು, ಸೃಜನಶೀಲತೆ ಎಂಬುದು ಛಾಯಾಗ್ರಾಹಕರಿಗೆ ಅತ್ಯಗತ್ಯವೆಂದು ಖ್ಯಾತ ಛಾಯಾಗ್ರಾಹಕ ಹಾಗೂ ಸಿನಿಮಾಟೋಗ್ರಾಫರ್ ಬಿ.ಆರ್.ವಿಶ್ವನಾಥ್ ಅವರು ತಿಳಿಸಿದರು.
ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿಂದು ನಡೆದ ವಿಶ್ವ ಛಾಯಾಗ್ರಹಣದ ದಿನಾಚರಣೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಫೋಟೋಗ್ರಫಿ ಕಲೆ ಎಂಬುದು ತನ್ನನ್ನು ತಾನು ಅಭಿವ್ಯಕ್ತಿಸುವ ಮಾಧ್ಯಮವಾಗಿದ್ದು, ಇಲ್ಲಿ ಛಾಯಾಗ್ರಾಹಕನ ಭಾವನೆಗಳು ಪ್ರಕಟಗೊಳ್ಳುತ್ತವೆ ಎಂದರಲ್ಲದೆ, ನಿರಂತರತೆ ಹಾಗೂ ತಾಳ್ಮೆ ಎಂಬುದು ಈ ಕ್ಷೇತ್ರಕ್ಕೆ ಅಗತ್ಯವೆಂದು ಹೇಳಿದರು.
ತಂತ್ರಜ್ಞಾನದ ಬೆಳವಣಿಗೆಯೂ ಒಬ್ಬ ಛಾಯಾಗ್ರಾಹಕನಿಗೆ ಬಹಳಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರಷ್ಟೇ ವೃತ್ತಿಪರತೆಗೆ ಸವಾಲುಗಳನ್ನು ಸಹ ಸೃಷ್ಟಿಸಿವೆ ಎಂದು ಹೇಳಿದರಲ್ಲದೆ, ನಿರಂತರ ಕಲಿಕೆಯಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ ಎಂದರು.
ಬದುಕು ಎಂಬುದೊಂದು ಕಾರ್ಯಾಗಾರವಿದ್ದಂತೆ, ಪ್ರತಿನಿತ್ಯ ಕಲಿಸುತ್ತಲೇ ಇರುತ್ತದೆ, ಕಲಿಯುವ ಮನಸ್ಥಿತಿಯನ್ನು ನಾವು ಹೊಂದಿರಬೇಕು ಎಂದರು ಹಾಗೂ ಶಿಬಿರಾರ್ಥಿಗಳೊಟ್ಟಿಗೆ ಸಂವಾದವನ್ನು ನಡೆಸಿದರು.
ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಛಾಯಾಗ್ರಾಹಕರು ಪ್ರಸ್ತುತದ ಬದಲಾವಣೆಗಳನ್ನು ಒಪ್ಪಿಕೊಂಡು ಒಗ್ಗಿಕೊಳ್ಳುವ ಗುಣವನ್ನು ರೂಢಿಸಿಕೊಳ್ಳಬೇಕೆಂದರಲ್ಲದೆ, ಹವ್ಯಾಸವಾಗಿ ಮಾತ್ರವಲ್ಲದೆ, ವೃತ್ತಿಯನ್ನಾಗಿ ಛಾಯಾಗ್ರಹಣದ ಕ್ಷೇತ್ರವನ್ನು ಆರಿಸಿಕೊಳ್ಳಬೇಕೆಂಬ ಮಾತನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಪನ್ಯಾಸಕರಾದ ದತ್ತಾತ್ರೇಯ, ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ, ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…