ಸೃಜನಶೀಲ ಚಿಂತನೆ ಹಾಗೂ ಚಟುವಟಿಕೆಗಳು ಸಂತೋಷದಾಯಕ‌ ಕಲಿಕೆಗೆ ಸಹಕಾರಿ- ಕವಿ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ

ಸೃಜನಶೀಲ ಚಿಂತನೆಗಳು ಮತ್ತು ಚಟುವಟಿಕೆಗಳು ಸಂತೋಷದಾಯಕ ಕಲಿಕೆಗೆ ಸಹಕಾರಿ ಅಗುತ್ತವೆ. ಸಂತೋಷದಿಂದ ಸಾಮರ್ಥ್ಯವು ಹೆಚ್ಚಿಸುತ್ತದೆ. ಸಾಮರ್ಥ್ಯ ಯಶಸ್ಸಿನ ಕಡೆಗೆ ಕರೆದೊಯ್ಯುತ್ತದೆ ಎಂದು ಕವಿ ಮತ್ತು ಕಲಾವಿದ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ ತಿಳಿಸಿದರು.

ತಾಲ್ಲೂಕಿನ ಕೊನಘಟ್ಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಂಗಭೂಮಿ ಮತ್ತು ವ್ಯಕ್ತಿ ವಿಕಸನ ಎಂಬ ವಿಷಯ ಕುರಿತು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅಭಿವ್ಯಕ್ತಿಪಡಿಸಿಕೊಂಡರೆ ಪ್ರತಿಭಾವಂತ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ ಎಂದರು.

ವಿದ್ಯಾರ್ಥಿಗಳು ಪಠ್ಯದೊಂದಿಗೆ ರಂಗಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ರಂಗಚಟುವಟಿಗಳು ನಡೆದರೆ ರಂಗಭೂಮಿ ಉಳಿಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಮತ್ತು ಯುವ ಸಮುದಾಯದಲ್ಲಿ ರಂಗಕಲೆಯನ್ನು ಪ್ರೋತ್ಸಾಹಿಸಲು ರಂಗಾಯಣ, ನಿನಾಸಂ ಮುಂತಾದಗಳು ನಿರಂತರವಾಗಿ ಕಾರ್ಯನಿವರ್ಹಿಸುತ್ತಿವೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳು ಮತ್ತು ಪಠ್ಯೇತರ ಚಟುವಟಿಕೆಗಳು ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಪ್ರತಿಭೆಗೆ ಮಾತ್ರ ಮನ್ನಣೆ ಇರುತ್ತದೆ. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯಾಭಿರುಚಿ ಮತ್ತು ಕಲಾಭಿವ್ಯಕ್ತಿಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಉಪನ್ಯಾಸಕರುಗಳಾದ ನಾಗಪ್ಪಗೌಡ, ಅಮೃತವರ್ಷಿಣಿ, ಹೇಮಾವತಿ, ವಿನುತ, ಕಲ್ಪನಾ, ಕೇಶವಮೂರ್ತಿ, ನಂದಕುಮಾರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

8 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

9 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

17 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

22 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago