ಸೃಜನಶೀಲ ಚಿಂತನೆ ಹಾಗೂ ಚಟುವಟಿಕೆಗಳು ಸಂತೋಷದಾಯಕ‌ ಕಲಿಕೆಗೆ ಸಹಕಾರಿ- ಕವಿ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ

ಸೃಜನಶೀಲ ಚಿಂತನೆಗಳು ಮತ್ತು ಚಟುವಟಿಕೆಗಳು ಸಂತೋಷದಾಯಕ ಕಲಿಕೆಗೆ ಸಹಕಾರಿ ಅಗುತ್ತವೆ. ಸಂತೋಷದಿಂದ ಸಾಮರ್ಥ್ಯವು ಹೆಚ್ಚಿಸುತ್ತದೆ. ಸಾಮರ್ಥ್ಯ ಯಶಸ್ಸಿನ ಕಡೆಗೆ ಕರೆದೊಯ್ಯುತ್ತದೆ ಎಂದು ಕವಿ ಮತ್ತು ಕಲಾವಿದ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ ತಿಳಿಸಿದರು.

ತಾಲ್ಲೂಕಿನ ಕೊನಘಟ್ಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಂಗಭೂಮಿ ಮತ್ತು ವ್ಯಕ್ತಿ ವಿಕಸನ ಎಂಬ ವಿಷಯ ಕುರಿತು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅಭಿವ್ಯಕ್ತಿಪಡಿಸಿಕೊಂಡರೆ ಪ್ರತಿಭಾವಂತ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ ಎಂದರು.

ವಿದ್ಯಾರ್ಥಿಗಳು ಪಠ್ಯದೊಂದಿಗೆ ರಂಗಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ರಂಗಚಟುವಟಿಗಳು ನಡೆದರೆ ರಂಗಭೂಮಿ ಉಳಿಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಮತ್ತು ಯುವ ಸಮುದಾಯದಲ್ಲಿ ರಂಗಕಲೆಯನ್ನು ಪ್ರೋತ್ಸಾಹಿಸಲು ರಂಗಾಯಣ, ನಿನಾಸಂ ಮುಂತಾದಗಳು ನಿರಂತರವಾಗಿ ಕಾರ್ಯನಿವರ್ಹಿಸುತ್ತಿವೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳು ಮತ್ತು ಪಠ್ಯೇತರ ಚಟುವಟಿಕೆಗಳು ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಪ್ರತಿಭೆಗೆ ಮಾತ್ರ ಮನ್ನಣೆ ಇರುತ್ತದೆ. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯಾಭಿರುಚಿ ಮತ್ತು ಕಲಾಭಿವ್ಯಕ್ತಿಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಉಪನ್ಯಾಸಕರುಗಳಾದ ನಾಗಪ್ಪಗೌಡ, ಅಮೃತವರ್ಷಿಣಿ, ಹೇಮಾವತಿ, ವಿನುತ, ಕಲ್ಪನಾ, ಕೇಶವಮೂರ್ತಿ, ನಂದಕುಮಾರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

3 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

4 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

4 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

7 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

13 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

15 hours ago