ಸೃಜನಶೀಲ ಚಿಂತನೆ ಹಾಗೂ ಚಟುವಟಿಕೆಗಳು ಸಂತೋಷದಾಯಕ‌ ಕಲಿಕೆಗೆ ಸಹಕಾರಿ- ಕವಿ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ

ಸೃಜನಶೀಲ ಚಿಂತನೆಗಳು ಮತ್ತು ಚಟುವಟಿಕೆಗಳು ಸಂತೋಷದಾಯಕ ಕಲಿಕೆಗೆ ಸಹಕಾರಿ ಅಗುತ್ತವೆ. ಸಂತೋಷದಿಂದ ಸಾಮರ್ಥ್ಯವು ಹೆಚ್ಚಿಸುತ್ತದೆ. ಸಾಮರ್ಥ್ಯ ಯಶಸ್ಸಿನ ಕಡೆಗೆ ಕರೆದೊಯ್ಯುತ್ತದೆ ಎಂದು ಕವಿ ಮತ್ತು ಕಲಾವಿದ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ ತಿಳಿಸಿದರು.

ತಾಲ್ಲೂಕಿನ ಕೊನಘಟ್ಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಂಗಭೂಮಿ ಮತ್ತು ವ್ಯಕ್ತಿ ವಿಕಸನ ಎಂಬ ವಿಷಯ ಕುರಿತು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅಭಿವ್ಯಕ್ತಿಪಡಿಸಿಕೊಂಡರೆ ಪ್ರತಿಭಾವಂತ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ ಎಂದರು.

ವಿದ್ಯಾರ್ಥಿಗಳು ಪಠ್ಯದೊಂದಿಗೆ ರಂಗಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ರಂಗಚಟುವಟಿಗಳು ನಡೆದರೆ ರಂಗಭೂಮಿ ಉಳಿಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಮತ್ತು ಯುವ ಸಮುದಾಯದಲ್ಲಿ ರಂಗಕಲೆಯನ್ನು ಪ್ರೋತ್ಸಾಹಿಸಲು ರಂಗಾಯಣ, ನಿನಾಸಂ ಮುಂತಾದಗಳು ನಿರಂತರವಾಗಿ ಕಾರ್ಯನಿವರ್ಹಿಸುತ್ತಿವೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳು ಮತ್ತು ಪಠ್ಯೇತರ ಚಟುವಟಿಕೆಗಳು ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಪ್ರತಿಭೆಗೆ ಮಾತ್ರ ಮನ್ನಣೆ ಇರುತ್ತದೆ. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯಾಭಿರುಚಿ ಮತ್ತು ಕಲಾಭಿವ್ಯಕ್ತಿಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಉಪನ್ಯಾಸಕರುಗಳಾದ ನಾಗಪ್ಪಗೌಡ, ಅಮೃತವರ್ಷಿಣಿ, ಹೇಮಾವತಿ, ವಿನುತ, ಕಲ್ಪನಾ, ಕೇಶವಮೂರ್ತಿ, ನಂದಕುಮಾರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

3 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

6 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

19 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

23 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago