ಸೃಜನಾತ್ಮಕ ಲೇಖಕರನ್ನು ಪ್ರೋತ್ಸಾಹಿಸಬೇಕು-ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಲೇಖಕರ ಕೃತಿಗಳನ್ನು ಓದುವ ಮೂಲಕ ಅವರನ್ನು ಸಮಾಜದಲ್ಲಿ ಗುರುತಿಸುವ ಕಾರ್ಯವನ್ನು ಮಾಡಬೇಕು ಹಾಗೂ ಸಾಹಿತಿಗಳನ್ನ ಪ್ರೋತ್ಸಾಹಿಸಬೇಕು ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜೆ.ಸಮೂಹ ಶಿಕ್ಷಣ ಸಂಸ್ಥೆಗಳು, ಐ.ಕ್ಯೂ.ಎ.ಸಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಎಂ ಚಿಕ್ಕಣ್ಣ ಅವರ “ಹೊಸ ಚಿಗುರು” ಸಂಶೋಧನಾ ಲೇಖನಗಳ ಸಂಕಲನ ಹಾಗೂ ಡಾ.ಆರ್.ನಾಗರಾಜು ಅವರ ಪ್ರಿನ್ಸಿಪಲ್ಸ್ ಆಫ್ ಇಂಟರ್ನೆಟ್ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಯಾರಲ್ಲಿ ವಿವೇಕ, ವಿದ್ವತ್ತು ಇದೆಯೋ ಅವರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಸಾಗಬೇಕು, ಸಾಹಿತಿಗಳನ್ನು ಪ್ರೀತಿಸಬೇಕು ಅವರ ಕೃತಿಗಳನ್ನು ಇಷ್ಟಪಡಬೇಕು ಆಗ ಮಾತ್ರ ಸಾಹಿತಿ ಬೆಳೆಯುತ್ತಾನೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನೃಪತುಂಗ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಸಿ ಪುಟ್ಟೇಶ್ “ಹೊಸ ಚಿಗುರು” ಕೃತಿ ಕುರಿತು ಮಾತನಾಡಿದ ಅವರು
ಸಂಶೋಧನಾ ಸಂಕಲನದ ಲೇಖನಗಳು ಕನ್ನಡ ಅಧ್ಯಾಪಕರು, ಯುವ ಸಂಶೋಧನಾರ್ಥಿಗಳು ಸಮಕಾಲೀನ ಸಂದರ್ಭದಲ್ಲಿ ಹೊಸ ಆಲೋಚನೆಗಳಿಗೆ ತೆರೆದುಕೊಳ್ಳುತ್ತಿರುವ ರೀತಿಯನ್ನೂ ಹಾಗೂ
ಈ ಕೃತಿಯಲ್ಲಿ ಕ್ಷೇತ್ರಕಾರ್ಯ, ಮಾಹಿತಿ ಸಂಗ್ರಹ, ವಿಶ್ಲೇಷಣೆಗಳು ಗಮನ ಸೆಳೆಯುತ್ತವೆ, ವಿವಿಧ ಜ್ಞಾನಶಿಸ್ತುಗಳ ಆಕರಗಳನ್ನು ಇಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲಾಗಿದೆ, ಸಾಹಿತ್ಯ ಕೃಷಿ, ಸಂಶೋಧನೆಯು ನಿರಂತರವಾಗಿ ಸಾಗಬೇಕಾದುದು, ಸಾಹಿತ್ಯ ಶೋಧವು ಚಲನಶೀಲ ಪ್ರಕ್ರಿಯೆ ಎಂಬುದು ಇಲ್ಲಿನ ಪ್ರಧಾನ ದೃಷ್ಟಿಕೋನವಾಗಿದೆ, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ರೀತಿಯನ್ನು ಸಹ ಇಲ್ಲಿನ ವಿಶ್ಲೇಷಣೆಗಳಲ್ಲಿ ಕಾಣಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್, ಮಾನವ ಸಂಪನ್ಮೂಲ ನಿರ್ದೇಶಕರಾದ ಬಾಬುರೆಡ್ಡಿ, ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪಿ. ಚೈತ್ರ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ಸಿ.ಪಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸ್ ಬಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 hour ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

2 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

2 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

2 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

5 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

9 hours ago