ಸೃಜನಾತ್ಮಕ ಲೇಖಕರನ್ನು ಪ್ರೋತ್ಸಾಹಿಸಬೇಕು-ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಲೇಖಕರ ಕೃತಿಗಳನ್ನು ಓದುವ ಮೂಲಕ ಅವರನ್ನು ಸಮಾಜದಲ್ಲಿ ಗುರುತಿಸುವ ಕಾರ್ಯವನ್ನು ಮಾಡಬೇಕು ಹಾಗೂ ಸಾಹಿತಿಗಳನ್ನ ಪ್ರೋತ್ಸಾಹಿಸಬೇಕು ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜೆ.ಸಮೂಹ ಶಿಕ್ಷಣ ಸಂಸ್ಥೆಗಳು, ಐ.ಕ್ಯೂ.ಎ.ಸಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಎಂ ಚಿಕ್ಕಣ್ಣ ಅವರ “ಹೊಸ ಚಿಗುರು” ಸಂಶೋಧನಾ ಲೇಖನಗಳ ಸಂಕಲನ ಹಾಗೂ ಡಾ.ಆರ್.ನಾಗರಾಜು ಅವರ ಪ್ರಿನ್ಸಿಪಲ್ಸ್ ಆಫ್ ಇಂಟರ್ನೆಟ್ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಯಾರಲ್ಲಿ ವಿವೇಕ, ವಿದ್ವತ್ತು ಇದೆಯೋ ಅವರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಸಾಗಬೇಕು, ಸಾಹಿತಿಗಳನ್ನು ಪ್ರೀತಿಸಬೇಕು ಅವರ ಕೃತಿಗಳನ್ನು ಇಷ್ಟಪಡಬೇಕು ಆಗ ಮಾತ್ರ ಸಾಹಿತಿ ಬೆಳೆಯುತ್ತಾನೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನೃಪತುಂಗ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಸಿ ಪುಟ್ಟೇಶ್ “ಹೊಸ ಚಿಗುರು” ಕೃತಿ ಕುರಿತು ಮಾತನಾಡಿದ ಅವರು
ಸಂಶೋಧನಾ ಸಂಕಲನದ ಲೇಖನಗಳು ಕನ್ನಡ ಅಧ್ಯಾಪಕರು, ಯುವ ಸಂಶೋಧನಾರ್ಥಿಗಳು ಸಮಕಾಲೀನ ಸಂದರ್ಭದಲ್ಲಿ ಹೊಸ ಆಲೋಚನೆಗಳಿಗೆ ತೆರೆದುಕೊಳ್ಳುತ್ತಿರುವ ರೀತಿಯನ್ನೂ ಹಾಗೂ
ಈ ಕೃತಿಯಲ್ಲಿ ಕ್ಷೇತ್ರಕಾರ್ಯ, ಮಾಹಿತಿ ಸಂಗ್ರಹ, ವಿಶ್ಲೇಷಣೆಗಳು ಗಮನ ಸೆಳೆಯುತ್ತವೆ, ವಿವಿಧ ಜ್ಞಾನಶಿಸ್ತುಗಳ ಆಕರಗಳನ್ನು ಇಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲಾಗಿದೆ, ಸಾಹಿತ್ಯ ಕೃಷಿ, ಸಂಶೋಧನೆಯು ನಿರಂತರವಾಗಿ ಸಾಗಬೇಕಾದುದು, ಸಾಹಿತ್ಯ ಶೋಧವು ಚಲನಶೀಲ ಪ್ರಕ್ರಿಯೆ ಎಂಬುದು ಇಲ್ಲಿನ ಪ್ರಧಾನ ದೃಷ್ಟಿಕೋನವಾಗಿದೆ, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ರೀತಿಯನ್ನು ಸಹ ಇಲ್ಲಿನ ವಿಶ್ಲೇಷಣೆಗಳಲ್ಲಿ ಕಾಣಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್, ಮಾನವ ಸಂಪನ್ಮೂಲ ನಿರ್ದೇಶಕರಾದ ಬಾಬುರೆಡ್ಡಿ, ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪಿ. ಚೈತ್ರ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ಸಿ.ಪಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸ್ ಬಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago