ಸೃಜನಾತ್ಮಕ ಲೇಖಕರನ್ನು ಪ್ರೋತ್ಸಾಹಿಸಬೇಕು-ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಲೇಖಕರ ಕೃತಿಗಳನ್ನು ಓದುವ ಮೂಲಕ ಅವರನ್ನು ಸಮಾಜದಲ್ಲಿ ಗುರುತಿಸುವ ಕಾರ್ಯವನ್ನು ಮಾಡಬೇಕು ಹಾಗೂ ಸಾಹಿತಿಗಳನ್ನ ಪ್ರೋತ್ಸಾಹಿಸಬೇಕು ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜೆ.ಸಮೂಹ ಶಿಕ್ಷಣ ಸಂಸ್ಥೆಗಳು, ಐ.ಕ್ಯೂ.ಎ.ಸಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಎಂ ಚಿಕ್ಕಣ್ಣ ಅವರ “ಹೊಸ ಚಿಗುರು” ಸಂಶೋಧನಾ ಲೇಖನಗಳ ಸಂಕಲನ ಹಾಗೂ ಡಾ.ಆರ್.ನಾಗರಾಜು ಅವರ ಪ್ರಿನ್ಸಿಪಲ್ಸ್ ಆಫ್ ಇಂಟರ್ನೆಟ್ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಯಾರಲ್ಲಿ ವಿವೇಕ, ವಿದ್ವತ್ತು ಇದೆಯೋ ಅವರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಸಾಗಬೇಕು, ಸಾಹಿತಿಗಳನ್ನು ಪ್ರೀತಿಸಬೇಕು ಅವರ ಕೃತಿಗಳನ್ನು ಇಷ್ಟಪಡಬೇಕು ಆಗ ಮಾತ್ರ ಸಾಹಿತಿ ಬೆಳೆಯುತ್ತಾನೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನೃಪತುಂಗ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಸಿ ಪುಟ್ಟೇಶ್ “ಹೊಸ ಚಿಗುರು” ಕೃತಿ ಕುರಿತು ಮಾತನಾಡಿದ ಅವರು
ಸಂಶೋಧನಾ ಸಂಕಲನದ ಲೇಖನಗಳು ಕನ್ನಡ ಅಧ್ಯಾಪಕರು, ಯುವ ಸಂಶೋಧನಾರ್ಥಿಗಳು ಸಮಕಾಲೀನ ಸಂದರ್ಭದಲ್ಲಿ ಹೊಸ ಆಲೋಚನೆಗಳಿಗೆ ತೆರೆದುಕೊಳ್ಳುತ್ತಿರುವ ರೀತಿಯನ್ನೂ ಹಾಗೂ
ಈ ಕೃತಿಯಲ್ಲಿ ಕ್ಷೇತ್ರಕಾರ್ಯ, ಮಾಹಿತಿ ಸಂಗ್ರಹ, ವಿಶ್ಲೇಷಣೆಗಳು ಗಮನ ಸೆಳೆಯುತ್ತವೆ, ವಿವಿಧ ಜ್ಞಾನಶಿಸ್ತುಗಳ ಆಕರಗಳನ್ನು ಇಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲಾಗಿದೆ, ಸಾಹಿತ್ಯ ಕೃಷಿ, ಸಂಶೋಧನೆಯು ನಿರಂತರವಾಗಿ ಸಾಗಬೇಕಾದುದು, ಸಾಹಿತ್ಯ ಶೋಧವು ಚಲನಶೀಲ ಪ್ರಕ್ರಿಯೆ ಎಂಬುದು ಇಲ್ಲಿನ ಪ್ರಧಾನ ದೃಷ್ಟಿಕೋನವಾಗಿದೆ, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ರೀತಿಯನ್ನು ಸಹ ಇಲ್ಲಿನ ವಿಶ್ಲೇಷಣೆಗಳಲ್ಲಿ ಕಾಣಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್, ಮಾನವ ಸಂಪನ್ಮೂಲ ನಿರ್ದೇಶಕರಾದ ಬಾಬುರೆಡ್ಡಿ, ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪಿ. ಚೈತ್ರ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ಸಿ.ಪಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸ್ ಬಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

2 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

3 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

11 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

21 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

22 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago