ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಅನ್ನು ಇದು ಹೊಂದಿದೆ.

ಅಭಿಯಾನದ ಅಡಿಯಲ್ಲಿ ಹೊಸ ಟಿವಿಸಿ ಅನ್ನು ಪರಿಚಯಿಸಲಾಗಿದ್ದು, ಜನಪ್ರಿಯ ನಿರ್ದೇಶಕರಾದ ಪ್ರಸೂನ್ ಪಾಂಡೆ ಇದನ್ನು ನಿರ್ದೇಶಿಸಿದ್ದಾರೆ. ತನ್ನ ವಿಶಿಷ್ಟ ರುಚಿಯಿಂದ ಗ್ರಾಹಕರನ್ನು ಮೆಚ್ಚಿಸುವ ಸೆಂಟರ್‌ಫ್ರೂಟ್‌ನ ವಿಶಿಷ್ಟ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಕೂಡಾ ಮತ್ತೆ ಮತ್ತೆ ಬೇಕೆನ್ನಿಸುವ ಮತ್ತು ಮೋಜಿನ ಅನುಭವನ್ನು ನೀಡುವುದನ್ನು ಪ್ರತಿಬಿಂಬಿಸುತ್ತದೆ.

ಸೆಂಟರ್‌ಫ್ರೂಟ್ ಹಿಂದಿನಿಂದಲೂ ತನ್ನ ವಿಶಿಷ್ಟ ಸ್ವಾದ ಮತ್ತು ತೊಡಗಿಸಿಕೊಳ್ಳುವ ಸಂವಹನಕ್ಕೆ ಹೆಸರಾಗಿದೆ ಹಾಗೂ ಈ ಹೊಸ ಅಭಿಯಾನವು ಬ್ರ್ಯಾಂಡ್‌ನ ಮೂಲ ಅಂಶವಾದ ಸಮಕಾಲೀನ ಮತ್ತು ತಾಜಾತನವನ್ನು ಒದಗಿಸುವುದಕ್ಕೆ ಪೂರಕವಾಗಿದೆ. ಇದು ಇಂದಿನ ಗ್ರಾಹಕರ ಆದ್ಯತೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ.

“ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಈ ಹೊಚ್ಚ ಹೊಸ ಅಭಿಯಾನದ ಅಡಿಯಲ್ಲಿ, ಸೆಂಟರ್‌ಫ್ರೂಟ್‌ನ ರುಚಿಗೆ ಹೆಚ್ಚು ಒತ್ತು ನೀಡಲಾಗಿದೆ. ಟ್ರಾಫಿಕ್ ಜಾಮ್‌ನಲ್ಲಿ ಇಡೀ ನಗರವೇ ಸ್ಥಗಿತಗೊಂಡಿದ್ದು, ಮಹಿಳೆ ವೇಗವಾಗಿ ಏರ್‌ಪೋರ್ಟ್‌ಗೆ ತಲುಪಬೇಕಿರುತ್ತದೆ. ಆದರೆ, ಆಕೆ ಎತ್ತಿನಗಾಡಿಯಲ್ಲಿ ಕೂತಿರುತ್ತಾಳೆ! ಆಗ ಎತ್ತಿನ ಗಾಡಿಯ ಮಾಲೀಕ ಕ್ರಿಯಾಶೀಲವಾಗಿ ಯೋಚಿಸುತ್ತಾನೆ. ಸೆಂಟರ್‌ಫ್ರೂಟ್ ಅನ್ನು ತಿಂದ ನಂತರ ಆತ ಸಮಸ್ಯೆಗೆ ಅದ್ಭುತ ಪರಿಹಾರವನ್ನು ಹುಡುಕುತ್ತಾನೆ.

ಈ ಬಿಡುಗಡೆಯ ಬಗ್ಗೆ ಮಾತನಾಡಿದ ಪರ್ಫೆಟ್ಟಿ ವ್ಯಾನ್ ಮೆಲ್ಲೆ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಗುಂಜನ್ ಖೇತನ್ “ಕೈಸಿ ಅಜೀಬ್ ಲಪ್‌ಲಪಾಯೀ” ಕೇವಲ ಒಂದು ಟ್ಯಾಗ್‌ಲೈನ್ ಅಲ್ಲ. ಇದೊಂದು ಅಭಿವ್ಯಕ್ತಿ. ನಿರಾಕರಿಸಲಾಗದ ರುಚಿಯನ್ನು ಒದಗಿಸುವ ಸೆಂಟರ್‌ಫ್ರೂಟ್‌ನ ಸ್ವಾದವನ್ನು ಇದು ಸೆರೆಹಿಡಿಯುತ್ತದೆ. ಈ ಅಭಿಯಾನದ ಮೂಲಕ, ನಮ್ಮ ಸಿಗ್ನೇಚರ್ ಪ್ರಾಡಕ್ಟ್ ಕಾರ್ಯಸಾಧ್ಯತೆ ಮತ್ತು ರುಚಿಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೋಜಿನ ಮತ್ತು ನಿರಾಕರಿಸಲಾಗದ ಅನುಭವದಿಂದಾಗಿ ಗ್ರಾಹಕರು ಇನ್ನಷ್ಟು ಬಯಸುವಂತೆ ಮಾಡುತ್ತದೆ. ಪ್ರತಿ ಬೈಟ್ ಅನ್ನೂ ಖುಷಿಯ ಕ್ಷಣವನ್ನಾಗಿಸುವ ನಮ್ಮ ಬದ್ಧತೆಗೆ ಇದು ನಿಜವಾದ ಪ್ರತಿಫಲನವಾಗಿದೆ.”

ಅಭಿಯಾನದ ಪರಿಕಲ್ಪನೆಯ ಬಗ್ಗೆ ಮಾತನಾಡಿದ ಒಗಿಲ್ವಿ ವೆಸ್ಟ್‌ನ ಮುಖ್ಯ ಕ್ರಿಯೇಟಿವ್ ಅಧಿಕಾರಿ ಅನುರಾಗ್ ಅಗ್ನಿಹೋತ್ರಿ, “ಭಾರತದಲ್ಲಿ ಸೆಂಟರ್‌ಫ್ರೂಟ್ ಅತ್ಯಂತ ಪ್ರೀತಿಯನ್ನು ಗಳಿಸಿದ ಬ್ರ್ಯಾಂಡ್ ಆಗಿದೆ. ಇದರ ಟ್ಯಾಗ್ ಲೈನ್ ಕೈಸಿ ಅಜೀಬ್ ಲಪ್‌ಲಪಾಯೀ ಕೂಡ ಜನಪ್ರಿಯವಾಗಿದೆ. ಕಳೆದ ಹಲವು ವರ್ಷಗಳಿಂದಲೂ, ರುಚಿಯ ಸರಳ ಭರವಸೆಯ ಕುರಿತಂತೆ ವಿಶಿಷ್ಟ ಕಥೆಗಳನ್ನು ನಾವು ರಚಿಸಿದ್ದೇವೆ. ಈ ಬಾರಿ, ಇನ್ನೊಂದು ಅಚ್ಚರಿಯು ಮತ್ತು ಸ್ಮರಣಾರ್ಹ ಕಥೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

18 minutes ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

4 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

15 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

16 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

17 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

19 hours ago