ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಅನ್ನು ಇದು ಹೊಂದಿದೆ.

ಅಭಿಯಾನದ ಅಡಿಯಲ್ಲಿ ಹೊಸ ಟಿವಿಸಿ ಅನ್ನು ಪರಿಚಯಿಸಲಾಗಿದ್ದು, ಜನಪ್ರಿಯ ನಿರ್ದೇಶಕರಾದ ಪ್ರಸೂನ್ ಪಾಂಡೆ ಇದನ್ನು ನಿರ್ದೇಶಿಸಿದ್ದಾರೆ. ತನ್ನ ವಿಶಿಷ್ಟ ರುಚಿಯಿಂದ ಗ್ರಾಹಕರನ್ನು ಮೆಚ್ಚಿಸುವ ಸೆಂಟರ್‌ಫ್ರೂಟ್‌ನ ವಿಶಿಷ್ಟ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಕೂಡಾ ಮತ್ತೆ ಮತ್ತೆ ಬೇಕೆನ್ನಿಸುವ ಮತ್ತು ಮೋಜಿನ ಅನುಭವನ್ನು ನೀಡುವುದನ್ನು ಪ್ರತಿಬಿಂಬಿಸುತ್ತದೆ.

ಸೆಂಟರ್‌ಫ್ರೂಟ್ ಹಿಂದಿನಿಂದಲೂ ತನ್ನ ವಿಶಿಷ್ಟ ಸ್ವಾದ ಮತ್ತು ತೊಡಗಿಸಿಕೊಳ್ಳುವ ಸಂವಹನಕ್ಕೆ ಹೆಸರಾಗಿದೆ ಹಾಗೂ ಈ ಹೊಸ ಅಭಿಯಾನವು ಬ್ರ್ಯಾಂಡ್‌ನ ಮೂಲ ಅಂಶವಾದ ಸಮಕಾಲೀನ ಮತ್ತು ತಾಜಾತನವನ್ನು ಒದಗಿಸುವುದಕ್ಕೆ ಪೂರಕವಾಗಿದೆ. ಇದು ಇಂದಿನ ಗ್ರಾಹಕರ ಆದ್ಯತೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ.

“ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಈ ಹೊಚ್ಚ ಹೊಸ ಅಭಿಯಾನದ ಅಡಿಯಲ್ಲಿ, ಸೆಂಟರ್‌ಫ್ರೂಟ್‌ನ ರುಚಿಗೆ ಹೆಚ್ಚು ಒತ್ತು ನೀಡಲಾಗಿದೆ. ಟ್ರಾಫಿಕ್ ಜಾಮ್‌ನಲ್ಲಿ ಇಡೀ ನಗರವೇ ಸ್ಥಗಿತಗೊಂಡಿದ್ದು, ಮಹಿಳೆ ವೇಗವಾಗಿ ಏರ್‌ಪೋರ್ಟ್‌ಗೆ ತಲುಪಬೇಕಿರುತ್ತದೆ. ಆದರೆ, ಆಕೆ ಎತ್ತಿನಗಾಡಿಯಲ್ಲಿ ಕೂತಿರುತ್ತಾಳೆ! ಆಗ ಎತ್ತಿನ ಗಾಡಿಯ ಮಾಲೀಕ ಕ್ರಿಯಾಶೀಲವಾಗಿ ಯೋಚಿಸುತ್ತಾನೆ. ಸೆಂಟರ್‌ಫ್ರೂಟ್ ಅನ್ನು ತಿಂದ ನಂತರ ಆತ ಸಮಸ್ಯೆಗೆ ಅದ್ಭುತ ಪರಿಹಾರವನ್ನು ಹುಡುಕುತ್ತಾನೆ.

ಈ ಬಿಡುಗಡೆಯ ಬಗ್ಗೆ ಮಾತನಾಡಿದ ಪರ್ಫೆಟ್ಟಿ ವ್ಯಾನ್ ಮೆಲ್ಲೆ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಗುಂಜನ್ ಖೇತನ್ “ಕೈಸಿ ಅಜೀಬ್ ಲಪ್‌ಲಪಾಯೀ” ಕೇವಲ ಒಂದು ಟ್ಯಾಗ್‌ಲೈನ್ ಅಲ್ಲ. ಇದೊಂದು ಅಭಿವ್ಯಕ್ತಿ. ನಿರಾಕರಿಸಲಾಗದ ರುಚಿಯನ್ನು ಒದಗಿಸುವ ಸೆಂಟರ್‌ಫ್ರೂಟ್‌ನ ಸ್ವಾದವನ್ನು ಇದು ಸೆರೆಹಿಡಿಯುತ್ತದೆ. ಈ ಅಭಿಯಾನದ ಮೂಲಕ, ನಮ್ಮ ಸಿಗ್ನೇಚರ್ ಪ್ರಾಡಕ್ಟ್ ಕಾರ್ಯಸಾಧ್ಯತೆ ಮತ್ತು ರುಚಿಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೋಜಿನ ಮತ್ತು ನಿರಾಕರಿಸಲಾಗದ ಅನುಭವದಿಂದಾಗಿ ಗ್ರಾಹಕರು ಇನ್ನಷ್ಟು ಬಯಸುವಂತೆ ಮಾಡುತ್ತದೆ. ಪ್ರತಿ ಬೈಟ್ ಅನ್ನೂ ಖುಷಿಯ ಕ್ಷಣವನ್ನಾಗಿಸುವ ನಮ್ಮ ಬದ್ಧತೆಗೆ ಇದು ನಿಜವಾದ ಪ್ರತಿಫಲನವಾಗಿದೆ.”

ಅಭಿಯಾನದ ಪರಿಕಲ್ಪನೆಯ ಬಗ್ಗೆ ಮಾತನಾಡಿದ ಒಗಿಲ್ವಿ ವೆಸ್ಟ್‌ನ ಮುಖ್ಯ ಕ್ರಿಯೇಟಿವ್ ಅಧಿಕಾರಿ ಅನುರಾಗ್ ಅಗ್ನಿಹೋತ್ರಿ, “ಭಾರತದಲ್ಲಿ ಸೆಂಟರ್‌ಫ್ರೂಟ್ ಅತ್ಯಂತ ಪ್ರೀತಿಯನ್ನು ಗಳಿಸಿದ ಬ್ರ್ಯಾಂಡ್ ಆಗಿದೆ. ಇದರ ಟ್ಯಾಗ್ ಲೈನ್ ಕೈಸಿ ಅಜೀಬ್ ಲಪ್‌ಲಪಾಯೀ ಕೂಡ ಜನಪ್ರಿಯವಾಗಿದೆ. ಕಳೆದ ಹಲವು ವರ್ಷಗಳಿಂದಲೂ, ರುಚಿಯ ಸರಳ ಭರವಸೆಯ ಕುರಿತಂತೆ ವಿಶಿಷ್ಟ ಕಥೆಗಳನ್ನು ನಾವು ರಚಿಸಿದ್ದೇವೆ. ಈ ಬಾರಿ, ಇನ್ನೊಂದು ಅಚ್ಚರಿಯು ಮತ್ತು ಸ್ಮರಣಾರ್ಹ ಕಥೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

10 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

15 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

15 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

20 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago