ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಅನ್ನು ಇದು ಹೊಂದಿದೆ.

ಅಭಿಯಾನದ ಅಡಿಯಲ್ಲಿ ಹೊಸ ಟಿವಿಸಿ ಅನ್ನು ಪರಿಚಯಿಸಲಾಗಿದ್ದು, ಜನಪ್ರಿಯ ನಿರ್ದೇಶಕರಾದ ಪ್ರಸೂನ್ ಪಾಂಡೆ ಇದನ್ನು ನಿರ್ದೇಶಿಸಿದ್ದಾರೆ. ತನ್ನ ವಿಶಿಷ್ಟ ರುಚಿಯಿಂದ ಗ್ರಾಹಕರನ್ನು ಮೆಚ್ಚಿಸುವ ಸೆಂಟರ್‌ಫ್ರೂಟ್‌ನ ವಿಶಿಷ್ಟ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಕೂಡಾ ಮತ್ತೆ ಮತ್ತೆ ಬೇಕೆನ್ನಿಸುವ ಮತ್ತು ಮೋಜಿನ ಅನುಭವನ್ನು ನೀಡುವುದನ್ನು ಪ್ರತಿಬಿಂಬಿಸುತ್ತದೆ.

ಸೆಂಟರ್‌ಫ್ರೂಟ್ ಹಿಂದಿನಿಂದಲೂ ತನ್ನ ವಿಶಿಷ್ಟ ಸ್ವಾದ ಮತ್ತು ತೊಡಗಿಸಿಕೊಳ್ಳುವ ಸಂವಹನಕ್ಕೆ ಹೆಸರಾಗಿದೆ ಹಾಗೂ ಈ ಹೊಸ ಅಭಿಯಾನವು ಬ್ರ್ಯಾಂಡ್‌ನ ಮೂಲ ಅಂಶವಾದ ಸಮಕಾಲೀನ ಮತ್ತು ತಾಜಾತನವನ್ನು ಒದಗಿಸುವುದಕ್ಕೆ ಪೂರಕವಾಗಿದೆ. ಇದು ಇಂದಿನ ಗ್ರಾಹಕರ ಆದ್ಯತೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ.

“ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಈ ಹೊಚ್ಚ ಹೊಸ ಅಭಿಯಾನದ ಅಡಿಯಲ್ಲಿ, ಸೆಂಟರ್‌ಫ್ರೂಟ್‌ನ ರುಚಿಗೆ ಹೆಚ್ಚು ಒತ್ತು ನೀಡಲಾಗಿದೆ. ಟ್ರಾಫಿಕ್ ಜಾಮ್‌ನಲ್ಲಿ ಇಡೀ ನಗರವೇ ಸ್ಥಗಿತಗೊಂಡಿದ್ದು, ಮಹಿಳೆ ವೇಗವಾಗಿ ಏರ್‌ಪೋರ್ಟ್‌ಗೆ ತಲುಪಬೇಕಿರುತ್ತದೆ. ಆದರೆ, ಆಕೆ ಎತ್ತಿನಗಾಡಿಯಲ್ಲಿ ಕೂತಿರುತ್ತಾಳೆ! ಆಗ ಎತ್ತಿನ ಗಾಡಿಯ ಮಾಲೀಕ ಕ್ರಿಯಾಶೀಲವಾಗಿ ಯೋಚಿಸುತ್ತಾನೆ. ಸೆಂಟರ್‌ಫ್ರೂಟ್ ಅನ್ನು ತಿಂದ ನಂತರ ಆತ ಸಮಸ್ಯೆಗೆ ಅದ್ಭುತ ಪರಿಹಾರವನ್ನು ಹುಡುಕುತ್ತಾನೆ.

ಈ ಬಿಡುಗಡೆಯ ಬಗ್ಗೆ ಮಾತನಾಡಿದ ಪರ್ಫೆಟ್ಟಿ ವ್ಯಾನ್ ಮೆಲ್ಲೆ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಗುಂಜನ್ ಖೇತನ್ “ಕೈಸಿ ಅಜೀಬ್ ಲಪ್‌ಲಪಾಯೀ” ಕೇವಲ ಒಂದು ಟ್ಯಾಗ್‌ಲೈನ್ ಅಲ್ಲ. ಇದೊಂದು ಅಭಿವ್ಯಕ್ತಿ. ನಿರಾಕರಿಸಲಾಗದ ರುಚಿಯನ್ನು ಒದಗಿಸುವ ಸೆಂಟರ್‌ಫ್ರೂಟ್‌ನ ಸ್ವಾದವನ್ನು ಇದು ಸೆರೆಹಿಡಿಯುತ್ತದೆ. ಈ ಅಭಿಯಾನದ ಮೂಲಕ, ನಮ್ಮ ಸಿಗ್ನೇಚರ್ ಪ್ರಾಡಕ್ಟ್ ಕಾರ್ಯಸಾಧ್ಯತೆ ಮತ್ತು ರುಚಿಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೋಜಿನ ಮತ್ತು ನಿರಾಕರಿಸಲಾಗದ ಅನುಭವದಿಂದಾಗಿ ಗ್ರಾಹಕರು ಇನ್ನಷ್ಟು ಬಯಸುವಂತೆ ಮಾಡುತ್ತದೆ. ಪ್ರತಿ ಬೈಟ್ ಅನ್ನೂ ಖುಷಿಯ ಕ್ಷಣವನ್ನಾಗಿಸುವ ನಮ್ಮ ಬದ್ಧತೆಗೆ ಇದು ನಿಜವಾದ ಪ್ರತಿಫಲನವಾಗಿದೆ.”

ಅಭಿಯಾನದ ಪರಿಕಲ್ಪನೆಯ ಬಗ್ಗೆ ಮಾತನಾಡಿದ ಒಗಿಲ್ವಿ ವೆಸ್ಟ್‌ನ ಮುಖ್ಯ ಕ್ರಿಯೇಟಿವ್ ಅಧಿಕಾರಿ ಅನುರಾಗ್ ಅಗ್ನಿಹೋತ್ರಿ, “ಭಾರತದಲ್ಲಿ ಸೆಂಟರ್‌ಫ್ರೂಟ್ ಅತ್ಯಂತ ಪ್ರೀತಿಯನ್ನು ಗಳಿಸಿದ ಬ್ರ್ಯಾಂಡ್ ಆಗಿದೆ. ಇದರ ಟ್ಯಾಗ್ ಲೈನ್ ಕೈಸಿ ಅಜೀಬ್ ಲಪ್‌ಲಪಾಯೀ ಕೂಡ ಜನಪ್ರಿಯವಾಗಿದೆ. ಕಳೆದ ಹಲವು ವರ್ಷಗಳಿಂದಲೂ, ರುಚಿಯ ಸರಳ ಭರವಸೆಯ ಕುರಿತಂತೆ ವಿಶಿಷ್ಟ ಕಥೆಗಳನ್ನು ನಾವು ರಚಿಸಿದ್ದೇವೆ. ಈ ಬಾರಿ, ಇನ್ನೊಂದು ಅಚ್ಚರಿಯು ಮತ್ತು ಸ್ಮರಣಾರ್ಹ ಕಥೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

8 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

8 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

10 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

11 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

13 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

19 hours ago