ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಅನ್ನು ಇದು ಹೊಂದಿದೆ.

ಅಭಿಯಾನದ ಅಡಿಯಲ್ಲಿ ಹೊಸ ಟಿವಿಸಿ ಅನ್ನು ಪರಿಚಯಿಸಲಾಗಿದ್ದು, ಜನಪ್ರಿಯ ನಿರ್ದೇಶಕರಾದ ಪ್ರಸೂನ್ ಪಾಂಡೆ ಇದನ್ನು ನಿರ್ದೇಶಿಸಿದ್ದಾರೆ. ತನ್ನ ವಿಶಿಷ್ಟ ರುಚಿಯಿಂದ ಗ್ರಾಹಕರನ್ನು ಮೆಚ್ಚಿಸುವ ಸೆಂಟರ್‌ಫ್ರೂಟ್‌ನ ವಿಶಿಷ್ಟ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಕೂಡಾ ಮತ್ತೆ ಮತ್ತೆ ಬೇಕೆನ್ನಿಸುವ ಮತ್ತು ಮೋಜಿನ ಅನುಭವನ್ನು ನೀಡುವುದನ್ನು ಪ್ರತಿಬಿಂಬಿಸುತ್ತದೆ.

ಸೆಂಟರ್‌ಫ್ರೂಟ್ ಹಿಂದಿನಿಂದಲೂ ತನ್ನ ವಿಶಿಷ್ಟ ಸ್ವಾದ ಮತ್ತು ತೊಡಗಿಸಿಕೊಳ್ಳುವ ಸಂವಹನಕ್ಕೆ ಹೆಸರಾಗಿದೆ ಹಾಗೂ ಈ ಹೊಸ ಅಭಿಯಾನವು ಬ್ರ್ಯಾಂಡ್‌ನ ಮೂಲ ಅಂಶವಾದ ಸಮಕಾಲೀನ ಮತ್ತು ತಾಜಾತನವನ್ನು ಒದಗಿಸುವುದಕ್ಕೆ ಪೂರಕವಾಗಿದೆ. ಇದು ಇಂದಿನ ಗ್ರಾಹಕರ ಆದ್ಯತೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ.

“ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಈ ಹೊಚ್ಚ ಹೊಸ ಅಭಿಯಾನದ ಅಡಿಯಲ್ಲಿ, ಸೆಂಟರ್‌ಫ್ರೂಟ್‌ನ ರುಚಿಗೆ ಹೆಚ್ಚು ಒತ್ತು ನೀಡಲಾಗಿದೆ. ಟ್ರಾಫಿಕ್ ಜಾಮ್‌ನಲ್ಲಿ ಇಡೀ ನಗರವೇ ಸ್ಥಗಿತಗೊಂಡಿದ್ದು, ಮಹಿಳೆ ವೇಗವಾಗಿ ಏರ್‌ಪೋರ್ಟ್‌ಗೆ ತಲುಪಬೇಕಿರುತ್ತದೆ. ಆದರೆ, ಆಕೆ ಎತ್ತಿನಗಾಡಿಯಲ್ಲಿ ಕೂತಿರುತ್ತಾಳೆ! ಆಗ ಎತ್ತಿನ ಗಾಡಿಯ ಮಾಲೀಕ ಕ್ರಿಯಾಶೀಲವಾಗಿ ಯೋಚಿಸುತ್ತಾನೆ. ಸೆಂಟರ್‌ಫ್ರೂಟ್ ಅನ್ನು ತಿಂದ ನಂತರ ಆತ ಸಮಸ್ಯೆಗೆ ಅದ್ಭುತ ಪರಿಹಾರವನ್ನು ಹುಡುಕುತ್ತಾನೆ.

ಈ ಬಿಡುಗಡೆಯ ಬಗ್ಗೆ ಮಾತನಾಡಿದ ಪರ್ಫೆಟ್ಟಿ ವ್ಯಾನ್ ಮೆಲ್ಲೆ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಗುಂಜನ್ ಖೇತನ್ “ಕೈಸಿ ಅಜೀಬ್ ಲಪ್‌ಲಪಾಯೀ” ಕೇವಲ ಒಂದು ಟ್ಯಾಗ್‌ಲೈನ್ ಅಲ್ಲ. ಇದೊಂದು ಅಭಿವ್ಯಕ್ತಿ. ನಿರಾಕರಿಸಲಾಗದ ರುಚಿಯನ್ನು ಒದಗಿಸುವ ಸೆಂಟರ್‌ಫ್ರೂಟ್‌ನ ಸ್ವಾದವನ್ನು ಇದು ಸೆರೆಹಿಡಿಯುತ್ತದೆ. ಈ ಅಭಿಯಾನದ ಮೂಲಕ, ನಮ್ಮ ಸಿಗ್ನೇಚರ್ ಪ್ರಾಡಕ್ಟ್ ಕಾರ್ಯಸಾಧ್ಯತೆ ಮತ್ತು ರುಚಿಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೋಜಿನ ಮತ್ತು ನಿರಾಕರಿಸಲಾಗದ ಅನುಭವದಿಂದಾಗಿ ಗ್ರಾಹಕರು ಇನ್ನಷ್ಟು ಬಯಸುವಂತೆ ಮಾಡುತ್ತದೆ. ಪ್ರತಿ ಬೈಟ್ ಅನ್ನೂ ಖುಷಿಯ ಕ್ಷಣವನ್ನಾಗಿಸುವ ನಮ್ಮ ಬದ್ಧತೆಗೆ ಇದು ನಿಜವಾದ ಪ್ರತಿಫಲನವಾಗಿದೆ.”

ಅಭಿಯಾನದ ಪರಿಕಲ್ಪನೆಯ ಬಗ್ಗೆ ಮಾತನಾಡಿದ ಒಗಿಲ್ವಿ ವೆಸ್ಟ್‌ನ ಮುಖ್ಯ ಕ್ರಿಯೇಟಿವ್ ಅಧಿಕಾರಿ ಅನುರಾಗ್ ಅಗ್ನಿಹೋತ್ರಿ, “ಭಾರತದಲ್ಲಿ ಸೆಂಟರ್‌ಫ್ರೂಟ್ ಅತ್ಯಂತ ಪ್ರೀತಿಯನ್ನು ಗಳಿಸಿದ ಬ್ರ್ಯಾಂಡ್ ಆಗಿದೆ. ಇದರ ಟ್ಯಾಗ್ ಲೈನ್ ಕೈಸಿ ಅಜೀಬ್ ಲಪ್‌ಲಪಾಯೀ ಕೂಡ ಜನಪ್ರಿಯವಾಗಿದೆ. ಕಳೆದ ಹಲವು ವರ್ಷಗಳಿಂದಲೂ, ರುಚಿಯ ಸರಳ ಭರವಸೆಯ ಕುರಿತಂತೆ ವಿಶಿಷ್ಟ ಕಥೆಗಳನ್ನು ನಾವು ರಚಿಸಿದ್ದೇವೆ. ಈ ಬಾರಿ, ಇನ್ನೊಂದು ಅಚ್ಚರಿಯು ಮತ್ತು ಸ್ಮರಣಾರ್ಹ ಕಥೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…

1 hour ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

2 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

6 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

7 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago