ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಅನ್ನು ಇದು ಹೊಂದಿದೆ.

ಅಭಿಯಾನದ ಅಡಿಯಲ್ಲಿ ಹೊಸ ಟಿವಿಸಿ ಅನ್ನು ಪರಿಚಯಿಸಲಾಗಿದ್ದು, ಜನಪ್ರಿಯ ನಿರ್ದೇಶಕರಾದ ಪ್ರಸೂನ್ ಪಾಂಡೆ ಇದನ್ನು ನಿರ್ದೇಶಿಸಿದ್ದಾರೆ. ತನ್ನ ವಿಶಿಷ್ಟ ರುಚಿಯಿಂದ ಗ್ರಾಹಕರನ್ನು ಮೆಚ್ಚಿಸುವ ಸೆಂಟರ್‌ಫ್ರೂಟ್‌ನ ವಿಶಿಷ್ಟ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಕೂಡಾ ಮತ್ತೆ ಮತ್ತೆ ಬೇಕೆನ್ನಿಸುವ ಮತ್ತು ಮೋಜಿನ ಅನುಭವನ್ನು ನೀಡುವುದನ್ನು ಪ್ರತಿಬಿಂಬಿಸುತ್ತದೆ.

ಸೆಂಟರ್‌ಫ್ರೂಟ್ ಹಿಂದಿನಿಂದಲೂ ತನ್ನ ವಿಶಿಷ್ಟ ಸ್ವಾದ ಮತ್ತು ತೊಡಗಿಸಿಕೊಳ್ಳುವ ಸಂವಹನಕ್ಕೆ ಹೆಸರಾಗಿದೆ ಹಾಗೂ ಈ ಹೊಸ ಅಭಿಯಾನವು ಬ್ರ್ಯಾಂಡ್‌ನ ಮೂಲ ಅಂಶವಾದ ಸಮಕಾಲೀನ ಮತ್ತು ತಾಜಾತನವನ್ನು ಒದಗಿಸುವುದಕ್ಕೆ ಪೂರಕವಾಗಿದೆ. ಇದು ಇಂದಿನ ಗ್ರಾಹಕರ ಆದ್ಯತೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ.

“ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಈ ಹೊಚ್ಚ ಹೊಸ ಅಭಿಯಾನದ ಅಡಿಯಲ್ಲಿ, ಸೆಂಟರ್‌ಫ್ರೂಟ್‌ನ ರುಚಿಗೆ ಹೆಚ್ಚು ಒತ್ತು ನೀಡಲಾಗಿದೆ. ಟ್ರಾಫಿಕ್ ಜಾಮ್‌ನಲ್ಲಿ ಇಡೀ ನಗರವೇ ಸ್ಥಗಿತಗೊಂಡಿದ್ದು, ಮಹಿಳೆ ವೇಗವಾಗಿ ಏರ್‌ಪೋರ್ಟ್‌ಗೆ ತಲುಪಬೇಕಿರುತ್ತದೆ. ಆದರೆ, ಆಕೆ ಎತ್ತಿನಗಾಡಿಯಲ್ಲಿ ಕೂತಿರುತ್ತಾಳೆ! ಆಗ ಎತ್ತಿನ ಗಾಡಿಯ ಮಾಲೀಕ ಕ್ರಿಯಾಶೀಲವಾಗಿ ಯೋಚಿಸುತ್ತಾನೆ. ಸೆಂಟರ್‌ಫ್ರೂಟ್ ಅನ್ನು ತಿಂದ ನಂತರ ಆತ ಸಮಸ್ಯೆಗೆ ಅದ್ಭುತ ಪರಿಹಾರವನ್ನು ಹುಡುಕುತ್ತಾನೆ.

ಈ ಬಿಡುಗಡೆಯ ಬಗ್ಗೆ ಮಾತನಾಡಿದ ಪರ್ಫೆಟ್ಟಿ ವ್ಯಾನ್ ಮೆಲ್ಲೆ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಗುಂಜನ್ ಖೇತನ್ “ಕೈಸಿ ಅಜೀಬ್ ಲಪ್‌ಲಪಾಯೀ” ಕೇವಲ ಒಂದು ಟ್ಯಾಗ್‌ಲೈನ್ ಅಲ್ಲ. ಇದೊಂದು ಅಭಿವ್ಯಕ್ತಿ. ನಿರಾಕರಿಸಲಾಗದ ರುಚಿಯನ್ನು ಒದಗಿಸುವ ಸೆಂಟರ್‌ಫ್ರೂಟ್‌ನ ಸ್ವಾದವನ್ನು ಇದು ಸೆರೆಹಿಡಿಯುತ್ತದೆ. ಈ ಅಭಿಯಾನದ ಮೂಲಕ, ನಮ್ಮ ಸಿಗ್ನೇಚರ್ ಪ್ರಾಡಕ್ಟ್ ಕಾರ್ಯಸಾಧ್ಯತೆ ಮತ್ತು ರುಚಿಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೋಜಿನ ಮತ್ತು ನಿರಾಕರಿಸಲಾಗದ ಅನುಭವದಿಂದಾಗಿ ಗ್ರಾಹಕರು ಇನ್ನಷ್ಟು ಬಯಸುವಂತೆ ಮಾಡುತ್ತದೆ. ಪ್ರತಿ ಬೈಟ್ ಅನ್ನೂ ಖುಷಿಯ ಕ್ಷಣವನ್ನಾಗಿಸುವ ನಮ್ಮ ಬದ್ಧತೆಗೆ ಇದು ನಿಜವಾದ ಪ್ರತಿಫಲನವಾಗಿದೆ.”

ಅಭಿಯಾನದ ಪರಿಕಲ್ಪನೆಯ ಬಗ್ಗೆ ಮಾತನಾಡಿದ ಒಗಿಲ್ವಿ ವೆಸ್ಟ್‌ನ ಮುಖ್ಯ ಕ್ರಿಯೇಟಿವ್ ಅಧಿಕಾರಿ ಅನುರಾಗ್ ಅಗ್ನಿಹೋತ್ರಿ, “ಭಾರತದಲ್ಲಿ ಸೆಂಟರ್‌ಫ್ರೂಟ್ ಅತ್ಯಂತ ಪ್ರೀತಿಯನ್ನು ಗಳಿಸಿದ ಬ್ರ್ಯಾಂಡ್ ಆಗಿದೆ. ಇದರ ಟ್ಯಾಗ್ ಲೈನ್ ಕೈಸಿ ಅಜೀಬ್ ಲಪ್‌ಲಪಾಯೀ ಕೂಡ ಜನಪ್ರಿಯವಾಗಿದೆ. ಕಳೆದ ಹಲವು ವರ್ಷಗಳಿಂದಲೂ, ರುಚಿಯ ಸರಳ ಭರವಸೆಯ ಕುರಿತಂತೆ ವಿಶಿಷ್ಟ ಕಥೆಗಳನ್ನು ನಾವು ರಚಿಸಿದ್ದೇವೆ. ಈ ಬಾರಿ, ಇನ್ನೊಂದು ಅಚ್ಚರಿಯು ಮತ್ತು ಸ್ಮರಣಾರ್ಹ ಕಥೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

7 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

7 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

13 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

22 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago