ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಅನ್ನು ಇದು ಹೊಂದಿದೆ.

ಅಭಿಯಾನದ ಅಡಿಯಲ್ಲಿ ಹೊಸ ಟಿವಿಸಿ ಅನ್ನು ಪರಿಚಯಿಸಲಾಗಿದ್ದು, ಜನಪ್ರಿಯ ನಿರ್ದೇಶಕರಾದ ಪ್ರಸೂನ್ ಪಾಂಡೆ ಇದನ್ನು ನಿರ್ದೇಶಿಸಿದ್ದಾರೆ. ತನ್ನ ವಿಶಿಷ್ಟ ರುಚಿಯಿಂದ ಗ್ರಾಹಕರನ್ನು ಮೆಚ್ಚಿಸುವ ಸೆಂಟರ್‌ಫ್ರೂಟ್‌ನ ವಿಶಿಷ್ಟ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಕೂಡಾ ಮತ್ತೆ ಮತ್ತೆ ಬೇಕೆನ್ನಿಸುವ ಮತ್ತು ಮೋಜಿನ ಅನುಭವನ್ನು ನೀಡುವುದನ್ನು ಪ್ರತಿಬಿಂಬಿಸುತ್ತದೆ.

ಸೆಂಟರ್‌ಫ್ರೂಟ್ ಹಿಂದಿನಿಂದಲೂ ತನ್ನ ವಿಶಿಷ್ಟ ಸ್ವಾದ ಮತ್ತು ತೊಡಗಿಸಿಕೊಳ್ಳುವ ಸಂವಹನಕ್ಕೆ ಹೆಸರಾಗಿದೆ ಹಾಗೂ ಈ ಹೊಸ ಅಭಿಯಾನವು ಬ್ರ್ಯಾಂಡ್‌ನ ಮೂಲ ಅಂಶವಾದ ಸಮಕಾಲೀನ ಮತ್ತು ತಾಜಾತನವನ್ನು ಒದಗಿಸುವುದಕ್ಕೆ ಪೂರಕವಾಗಿದೆ. ಇದು ಇಂದಿನ ಗ್ರಾಹಕರ ಆದ್ಯತೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ.

“ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಈ ಹೊಚ್ಚ ಹೊಸ ಅಭಿಯಾನದ ಅಡಿಯಲ್ಲಿ, ಸೆಂಟರ್‌ಫ್ರೂಟ್‌ನ ರುಚಿಗೆ ಹೆಚ್ಚು ಒತ್ತು ನೀಡಲಾಗಿದೆ. ಟ್ರಾಫಿಕ್ ಜಾಮ್‌ನಲ್ಲಿ ಇಡೀ ನಗರವೇ ಸ್ಥಗಿತಗೊಂಡಿದ್ದು, ಮಹಿಳೆ ವೇಗವಾಗಿ ಏರ್‌ಪೋರ್ಟ್‌ಗೆ ತಲುಪಬೇಕಿರುತ್ತದೆ. ಆದರೆ, ಆಕೆ ಎತ್ತಿನಗಾಡಿಯಲ್ಲಿ ಕೂತಿರುತ್ತಾಳೆ! ಆಗ ಎತ್ತಿನ ಗಾಡಿಯ ಮಾಲೀಕ ಕ್ರಿಯಾಶೀಲವಾಗಿ ಯೋಚಿಸುತ್ತಾನೆ. ಸೆಂಟರ್‌ಫ್ರೂಟ್ ಅನ್ನು ತಿಂದ ನಂತರ ಆತ ಸಮಸ್ಯೆಗೆ ಅದ್ಭುತ ಪರಿಹಾರವನ್ನು ಹುಡುಕುತ್ತಾನೆ.

ಈ ಬಿಡುಗಡೆಯ ಬಗ್ಗೆ ಮಾತನಾಡಿದ ಪರ್ಫೆಟ್ಟಿ ವ್ಯಾನ್ ಮೆಲ್ಲೆ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಗುಂಜನ್ ಖೇತನ್ “ಕೈಸಿ ಅಜೀಬ್ ಲಪ್‌ಲಪಾಯೀ” ಕೇವಲ ಒಂದು ಟ್ಯಾಗ್‌ಲೈನ್ ಅಲ್ಲ. ಇದೊಂದು ಅಭಿವ್ಯಕ್ತಿ. ನಿರಾಕರಿಸಲಾಗದ ರುಚಿಯನ್ನು ಒದಗಿಸುವ ಸೆಂಟರ್‌ಫ್ರೂಟ್‌ನ ಸ್ವಾದವನ್ನು ಇದು ಸೆರೆಹಿಡಿಯುತ್ತದೆ. ಈ ಅಭಿಯಾನದ ಮೂಲಕ, ನಮ್ಮ ಸಿಗ್ನೇಚರ್ ಪ್ರಾಡಕ್ಟ್ ಕಾರ್ಯಸಾಧ್ಯತೆ ಮತ್ತು ರುಚಿಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೋಜಿನ ಮತ್ತು ನಿರಾಕರಿಸಲಾಗದ ಅನುಭವದಿಂದಾಗಿ ಗ್ರಾಹಕರು ಇನ್ನಷ್ಟು ಬಯಸುವಂತೆ ಮಾಡುತ್ತದೆ. ಪ್ರತಿ ಬೈಟ್ ಅನ್ನೂ ಖುಷಿಯ ಕ್ಷಣವನ್ನಾಗಿಸುವ ನಮ್ಮ ಬದ್ಧತೆಗೆ ಇದು ನಿಜವಾದ ಪ್ರತಿಫಲನವಾಗಿದೆ.”

ಅಭಿಯಾನದ ಪರಿಕಲ್ಪನೆಯ ಬಗ್ಗೆ ಮಾತನಾಡಿದ ಒಗಿಲ್ವಿ ವೆಸ್ಟ್‌ನ ಮುಖ್ಯ ಕ್ರಿಯೇಟಿವ್ ಅಧಿಕಾರಿ ಅನುರಾಗ್ ಅಗ್ನಿಹೋತ್ರಿ, “ಭಾರತದಲ್ಲಿ ಸೆಂಟರ್‌ಫ್ರೂಟ್ ಅತ್ಯಂತ ಪ್ರೀತಿಯನ್ನು ಗಳಿಸಿದ ಬ್ರ್ಯಾಂಡ್ ಆಗಿದೆ. ಇದರ ಟ್ಯಾಗ್ ಲೈನ್ ಕೈಸಿ ಅಜೀಬ್ ಲಪ್‌ಲಪಾಯೀ ಕೂಡ ಜನಪ್ರಿಯವಾಗಿದೆ. ಕಳೆದ ಹಲವು ವರ್ಷಗಳಿಂದಲೂ, ರುಚಿಯ ಸರಳ ಭರವಸೆಯ ಕುರಿತಂತೆ ವಿಶಿಷ್ಟ ಕಥೆಗಳನ್ನು ನಾವು ರಚಿಸಿದ್ದೇವೆ. ಈ ಬಾರಿ, ಇನ್ನೊಂದು ಅಚ್ಚರಿಯು ಮತ್ತು ಸ್ಮರಣಾರ್ಹ ಕಥೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 minutes ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

2 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago