ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಅನ್ನು ಇದು ಹೊಂದಿದೆ.

ಅಭಿಯಾನದ ಅಡಿಯಲ್ಲಿ ಹೊಸ ಟಿವಿಸಿ ಅನ್ನು ಪರಿಚಯಿಸಲಾಗಿದ್ದು, ಜನಪ್ರಿಯ ನಿರ್ದೇಶಕರಾದ ಪ್ರಸೂನ್ ಪಾಂಡೆ ಇದನ್ನು ನಿರ್ದೇಶಿಸಿದ್ದಾರೆ. ತನ್ನ ವಿಶಿಷ್ಟ ರುಚಿಯಿಂದ ಗ್ರಾಹಕರನ್ನು ಮೆಚ್ಚಿಸುವ ಸೆಂಟರ್‌ಫ್ರೂಟ್‌ನ ವಿಶಿಷ್ಟ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಟ್ಯಾಗ್‌ಲೈನ್ ಕೂಡಾ ಮತ್ತೆ ಮತ್ತೆ ಬೇಕೆನ್ನಿಸುವ ಮತ್ತು ಮೋಜಿನ ಅನುಭವನ್ನು ನೀಡುವುದನ್ನು ಪ್ರತಿಬಿಂಬಿಸುತ್ತದೆ.

ಸೆಂಟರ್‌ಫ್ರೂಟ್ ಹಿಂದಿನಿಂದಲೂ ತನ್ನ ವಿಶಿಷ್ಟ ಸ್ವಾದ ಮತ್ತು ತೊಡಗಿಸಿಕೊಳ್ಳುವ ಸಂವಹನಕ್ಕೆ ಹೆಸರಾಗಿದೆ ಹಾಗೂ ಈ ಹೊಸ ಅಭಿಯಾನವು ಬ್ರ್ಯಾಂಡ್‌ನ ಮೂಲ ಅಂಶವಾದ ಸಮಕಾಲೀನ ಮತ್ತು ತಾಜಾತನವನ್ನು ಒದಗಿಸುವುದಕ್ಕೆ ಪೂರಕವಾಗಿದೆ. ಇದು ಇಂದಿನ ಗ್ರಾಹಕರ ಆದ್ಯತೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ.

“ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ ಈ ಹೊಚ್ಚ ಹೊಸ ಅಭಿಯಾನದ ಅಡಿಯಲ್ಲಿ, ಸೆಂಟರ್‌ಫ್ರೂಟ್‌ನ ರುಚಿಗೆ ಹೆಚ್ಚು ಒತ್ತು ನೀಡಲಾಗಿದೆ. ಟ್ರಾಫಿಕ್ ಜಾಮ್‌ನಲ್ಲಿ ಇಡೀ ನಗರವೇ ಸ್ಥಗಿತಗೊಂಡಿದ್ದು, ಮಹಿಳೆ ವೇಗವಾಗಿ ಏರ್‌ಪೋರ್ಟ್‌ಗೆ ತಲುಪಬೇಕಿರುತ್ತದೆ. ಆದರೆ, ಆಕೆ ಎತ್ತಿನಗಾಡಿಯಲ್ಲಿ ಕೂತಿರುತ್ತಾಳೆ! ಆಗ ಎತ್ತಿನ ಗಾಡಿಯ ಮಾಲೀಕ ಕ್ರಿಯಾಶೀಲವಾಗಿ ಯೋಚಿಸುತ್ತಾನೆ. ಸೆಂಟರ್‌ಫ್ರೂಟ್ ಅನ್ನು ತಿಂದ ನಂತರ ಆತ ಸಮಸ್ಯೆಗೆ ಅದ್ಭುತ ಪರಿಹಾರವನ್ನು ಹುಡುಕುತ್ತಾನೆ.

ಈ ಬಿಡುಗಡೆಯ ಬಗ್ಗೆ ಮಾತನಾಡಿದ ಪರ್ಫೆಟ್ಟಿ ವ್ಯಾನ್ ಮೆಲ್ಲೆ ಇಂಡಿಯಾದ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಗುಂಜನ್ ಖೇತನ್ “ಕೈಸಿ ಅಜೀಬ್ ಲಪ್‌ಲಪಾಯೀ” ಕೇವಲ ಒಂದು ಟ್ಯಾಗ್‌ಲೈನ್ ಅಲ್ಲ. ಇದೊಂದು ಅಭಿವ್ಯಕ್ತಿ. ನಿರಾಕರಿಸಲಾಗದ ರುಚಿಯನ್ನು ಒದಗಿಸುವ ಸೆಂಟರ್‌ಫ್ರೂಟ್‌ನ ಸ್ವಾದವನ್ನು ಇದು ಸೆರೆಹಿಡಿಯುತ್ತದೆ. ಈ ಅಭಿಯಾನದ ಮೂಲಕ, ನಮ್ಮ ಸಿಗ್ನೇಚರ್ ಪ್ರಾಡಕ್ಟ್ ಕಾರ್ಯಸಾಧ್ಯತೆ ಮತ್ತು ರುಚಿಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೋಜಿನ ಮತ್ತು ನಿರಾಕರಿಸಲಾಗದ ಅನುಭವದಿಂದಾಗಿ ಗ್ರಾಹಕರು ಇನ್ನಷ್ಟು ಬಯಸುವಂತೆ ಮಾಡುತ್ತದೆ. ಪ್ರತಿ ಬೈಟ್ ಅನ್ನೂ ಖುಷಿಯ ಕ್ಷಣವನ್ನಾಗಿಸುವ ನಮ್ಮ ಬದ್ಧತೆಗೆ ಇದು ನಿಜವಾದ ಪ್ರತಿಫಲನವಾಗಿದೆ.”

ಅಭಿಯಾನದ ಪರಿಕಲ್ಪನೆಯ ಬಗ್ಗೆ ಮಾತನಾಡಿದ ಒಗಿಲ್ವಿ ವೆಸ್ಟ್‌ನ ಮುಖ್ಯ ಕ್ರಿಯೇಟಿವ್ ಅಧಿಕಾರಿ ಅನುರಾಗ್ ಅಗ್ನಿಹೋತ್ರಿ, “ಭಾರತದಲ್ಲಿ ಸೆಂಟರ್‌ಫ್ರೂಟ್ ಅತ್ಯಂತ ಪ್ರೀತಿಯನ್ನು ಗಳಿಸಿದ ಬ್ರ್ಯಾಂಡ್ ಆಗಿದೆ. ಇದರ ಟ್ಯಾಗ್ ಲೈನ್ ಕೈಸಿ ಅಜೀಬ್ ಲಪ್‌ಲಪಾಯೀ ಕೂಡ ಜನಪ್ರಿಯವಾಗಿದೆ. ಕಳೆದ ಹಲವು ವರ್ಷಗಳಿಂದಲೂ, ರುಚಿಯ ಸರಳ ಭರವಸೆಯ ಕುರಿತಂತೆ ವಿಶಿಷ್ಟ ಕಥೆಗಳನ್ನು ನಾವು ರಚಿಸಿದ್ದೇವೆ. ಈ ಬಾರಿ, ಇನ್ನೊಂದು ಅಚ್ಚರಿಯು ಮತ್ತು ಸ್ಮರಣಾರ್ಹ ಕಥೆಯನ್ನು ನಾವು ಹೊಂದಿದ್ದೇವೆ ಎಂದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

2 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

13 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

18 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago