ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ದೇವನಹಳ್ಳಿ ಟೌನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೆಪ್ಟೆಂಬರ್ ನ ಎರಡನೇ ವಾರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ’ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು, ಉದ್ಯೋಗಾಕಾಂಕ್ಷಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮ ವಹಿಸಿ ಉದ್ಯೋಗಾಂಕ್ಷಿಗಳ ಆನುಕೂಲವಾಗುವಂತೆ ನೋಂದಣಿಗಾಗಿ ಆನ್ಲೈನ್ ಪೋರ್ಟಲ್ ಸಿದ್ದಪಡಿಸಿ. ಉದ್ಯೋಗಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ವ್ಯಾಪಕ ಪ್ರಚಾರ ಮಾಡಿ, ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಲು ಪೂರ್ವ ಯೋಜನೆ ಸಿದ್ದಪಡಿಸಿ ಎಂದು ಹೇಳಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಟಿ.ಕೆ ರಮೇಶ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…