ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.
ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್ ಪ್ರತಿ.
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…