ಸೆಪ್ಟೆಂಬರ್ 14 ರಂದು ಉದ್ಯೋಗ ನೋಂದಣಿ ಶಿಬಿರ

ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.

ಎಸ್‌.ಎಸ್‌.ಎಲ್‌.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.

ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್‌ ಪ್ರತಿ.

ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

44 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

56 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago