ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.
ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್ ಪ್ರತಿ.
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…