ಸೆಪ್ಟೆಂಬರ್ 14 ರಂದು ಉದ್ಯೋಗ ನೋಂದಣಿ ಶಿಬಿರ

ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.

ಎಸ್‌.ಎಸ್‌.ಎಲ್‌.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.

ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್‌ ಪ್ರತಿ.

ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago