ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.
ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್ ಪ್ರತಿ.
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…