ಬೆಂಗಳೂರು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರ ಗುರುವಾರದಂದು ಬೆಳಿಗ್ಗೆ 11 ಗಂಟೆಯಿಂದ 03 ಗಂಟೆಯವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು” ಇಲ್ಲಿ ಆಯೋಜಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.
ಉದ್ಯೋಗ ನೋಂದಣಿ ಮಾಡಿಸಲು ಬೇಕಿರುವ ದಾಖಲಾತಿಗಳು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಪಿ.ಯು.ಸಿ ಮೂಲ ಅಂಕಪಟ್ಟಿ ಹಾಗೂ ನಕಲುಪ್ರತಿ (ಅನ್ವಯಿಸುವವರಿಗೆ), ಪದವಿಯ ಎಲ್ಲಾ ಸೆಮಿಸ್ಟರ್ಗಳ ಮೂಲ ಅಂಕಪಟ್ಟಿಗಳು ಹಾಗೂ ನಕಲು ಪ್ರತಿಗಳು (ಅನ್ವಯಿಸುವವರಿಗೆ), ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದಕ್ಕೆ ಸಂಬಂಧಿಸಿದ ಅಂಕಪಟ್ಟಿ ಪ್ರಮಾಣಪತ್ರಗಳು (ಅನ್ವಯಿಸುವವರಿಗೆ), ಜಾತಿ ಪ್ರಮಾಣ ಪತ್ರ (ಅನ್ವಯಿಸುವವರಿಗೆ) ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ ಕಾರ್ಡ್ ಪ್ರತಿ.
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…