Categories: ಲೇಖನ

ಸೆಲ್ಫೀಗಳ (ಫೋಟೋ) ನಡುವೆ ಮಾಯವಾಗುತ್ತಿರುವ ಮಾನವೀಯತೆ……

ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ ಮನಸ್ಥಿತಿಯ ಹಿಂದೆ ವ್ಯವಸ್ಥೆಯ ಕ್ರೌರ್ಯ – ಮೌಲ್ಯಗಳ ಕುಸಿತ ತನ್ನ ಪ್ರಭಾವ ಬೀರಿದೆ……

ಈ ವಿಷಯದಲ್ಲಿ ಸುಪ್ರೀಂಕೋರ್ಟಿನ ಆದೇಶ ಜನರಿಗೆ ಅನುಕೂಲವಾಗುವಂತಿದ್ದರೂ ನಮ್ಮ ಪೊಲೀಸರ ವರ್ತನೆ ಇದಕ್ಕೆ ಪೂರಕವಾಗಿಲ್ಲ. ಅವರ ಭಾಷೆ ಮತ್ತು ನಡವಳಿಕೆ ಸಾಮಾನ್ಯರ ಬಗ್ಗೆ ಅಸಹನೀಯವಾಗಿಯೇ ಇದೆ…..

ಬ್ಯಾಂಕುಗಳಲ್ಲಿ ಮಾಸಿದ ಹಳೆಯ ಬಟ್ಟೆಯ ಅಥವಾ ಪಂಚೆ ಟವಲ್ ಹಾಕಿದ ಅಮಾಯಕ ಜನರ ಮುಗ್ಧ ಮತ್ತು ತಿಳಿವಳಿಕೆ ಕೊರತೆಯ ಪ್ರಶ್ನೆಗಳಿಗೆ ಅಲ್ಲಿನ ಬಹುತೇಕ ಅಧಿಕಾರಿಗಳು ಉತ್ತರಿಸುವ ರೀತಿ ಅವಮಾನಕರವಾಗಿಯೇ ಇರುತ್ತದೆ……

ಆಸ್ಪತ್ರೆಗಳಲ್ಲಿ ಬಡವರಿಗೆ ನೀಡುವ ಚಿಕಿತ್ಸೆಗಳ ಗುಣಮಟ್ಟದಲ್ಲಿ ಕಣ್ಣಿಗೆ ಕಾಣುವಷ್ಟು ನಿರ್ಲಕ್ಷ್ಯ – ಪಕ್ಷಪಾತವಿರುತ್ತದೆ…..

ಮಾಧ್ಯಮಗಳಲ್ಲಿ ದುಷ್ಟತನಕ್ಕೆ ನೀಡುವ ಪ್ರಾಮುಖ್ಯತೆ ಒಳ್ಳೆಯ – ಅತ್ಯುತ್ತಮ ಸಾಧಕರ ಪ್ರಚಾರಕ್ಕೆ ನೀಡುವುದಿಲ್ಲ. ಕಪಟ ಪ್ರದರ್ಶಕ ಮನೋಭಾವನೆಗೇ ಹೆಚ್ಚಿನ ಆಧ್ಯತೆ ನೀಡುತ್ತಾರೆ…..

ಸರ್ಕಾರದ ಯಾವುದೇ ಇಲಾಖೆಯಲ್ಲಿ ಲಂಚವಿಲ್ಲದೆ – ನಿಮ್ಮನ್ನು ಸತಾಯಿಸದೆ ಕೆಲಸವಾಗಿದೆ ಎಂದರೆ ನೀವು ಅದೃಷ್ಟವಂತರೆಂದೇ ಭಾವಿಸಿ ಅಥವಾ ನೀವು ಪ್ರಭಾವಿಗಳೋ, ರಾಜಕಾರಣಿಗಳ ಸಂಬಂಧಿಗಳೋ, ರೌಡಿಯೋ ಆಗಿರಬೇಕು. ಇಲ್ಲದಿದ್ದರೆ ನಿಮ್ಮ ಸಂಕಷ್ಟಗಳಿಗೆ ಕೊನೆಯೇ ಇಲ್ಲ…..

ಇದು ಕೇವಲ ಉದಾಹರಣೆಗಳಷ್ಟೆ.
ಇಡೀ ವ್ಯವಸ್ಥೆ ಹೀಗೆಯೇ ನಡೆಯುತ್ತದೆ.
ಒಂದು ವೇಳೆ ನೀವು ಶ್ರೀಮಂತರೋ, ಬಲಶಾಲಿಗಳೋ, ಅತಿ ಧೈರ್ಯವಂತರೋ ಆಗಿದ್ದರೆ ವ್ಯವಸ್ಥೆ ಅಷ್ಟೊಂದು ಕಠೋರವಾಗಿ ವರ್ತಿಸುವುದಿಲ್ಲ. ಅಷ್ಟಕ್ಕೇ ಎಲ್ಲಾ ಸರಿಯಿದೆ ಎಂದು ಭಾವಿಸದಿರಿ……

ಜನಸಂಖ್ಯೆಯ ಅತಿಯಾದ ಒತ್ತಡ, ಮೌಲ್ಯಗಳ ಕುಸಿತ, ವೇಗದ ಮತ್ತು ದುರಾಸೆಯ ಜೀವನಶೈಲಿ, ಬೇಗನೆ ನಿರಾಸೆಗೊಳ್ಳುವ ಮನಸ್ಥಿತಿ, ಅದರಿಂದಾಗಿಯೇ ಉಂಟಾದ ಉದಾಸೀನತೆ ಜನರನ್ನು ಒತ್ತಡದಲ್ಲಿಟ್ಟಿದೆ……

ಆದ್ದರಿಂದಲೇ ಅಪಘಾತಗಳಂತ ಸಂದರ್ಭಗಳಲ್ಲಿ ಜನರಿಗೆ ಸಹಾಯಕ್ಕಿಂತ ಸೆಲ್ಫಿಯೇ ಮುಖ್ಯವಾಗುತ್ತದೆ…..

ಅದರೆ, ಕೆಲವು ಅಪರೂಪದ ಸಂದರ್ಭಗಳಲ್ಲಿ ಅಪಘಾತದ ಭೀಕರತೆ ಬಹುಶಃ ಅಲ್ಲಿದ್ದ ಜನರು ರಕ್ತ ಮತ್ತು ದೇಹದ ಭಾಗಗಳ ಚೆಲ್ಲಾಪಿಲ್ಲಿಯಿಂದ, ಭಯ ಆತಂಕದಿಂದ ಮನಸ್ಸಿದ್ದರೂ ಸಹಾಯಕ್ಕೆ ಬರದಿರುವ ಸಾಧ್ಯತೆಯೂ ಇರುತ್ತದೆ……

ನಮ್ಮ ಆತ್ಮೀಯರು ಅಲ್ಲಿದ್ದರೆ ಅವರಿಗೆ ಸಹಾಯ ಖಂಡಿತ ಸಿಗುತ್ತದೆ. ಅಪರಿಚಿತರ ಬಗ್ಗೆ ಮಾತ್ರ ಈ ಧೋರಣೆಯಿದೆ. ಏಕೆಂದರೆ ಟಿವಿಯಲ್ಲಿ ಆ ದೃಶ್ಯ ನೋಡುವಾಗಲೇ ಮೈ ನಡುಗುತ್ತದೆ.. ಇನ್ನು ಸ್ಪಾಟ್ ನಲ್ಲಿ ಇದ್ದರೆ ತಲೆತಿರುಗಿ ಬಿದ್ದರೂ ಆಶ್ಚರ್ಯವಿಲ್ಲ. ಇಲ್ಲಿ ಕುಳಿತುಕೊಂಡು ಹೇಳುವಷ್ಟು ಸುಲಭ ಸ್ಥಿತಿ ಈ ವಿಷಯದಲ್ಲಿ ಕಷ್ಟ……

ಆದ್ದರಿಂದ ಕೇವಲ ಇದೊಂದೆ ವಿಷಯದಲ್ಲಿ ಸುಧಾರಣೆ ಸಾಧ್ಯವಿಲ್ಲ. ಇಡೀ ವ್ಯವಸ್ಥೆಯ ಮಾನಸಿಕ – ನೈತಿಕ ಗಟ್ಟಿತನವನ್ನು ಪುನರ್ ರೂಪಿಸಬೇಕಾದ ಅವಶ್ಯಕತೆ ಇದೆ……

ಇತ್ತೀಚೆಗೆ ಅಪಘಾತದ ಸಂದರ್ಭದಲ್ಲಿ ಕೆಲವರು ಸಹಾಯಕ್ಕಿಂತ ಫೋಟೋ ತೆಗೆಯಲು ತೋರಿಸಿದ ಆಸಕ್ತಿಯನ್ನು ಟಿವಿ ಚಾನೆಲ್ ನಲ್ಲಿ ವೀಕ್ಷಿಸಿದಾಗ ಮೂಡಿದ ಭಾವನೆಗಳು……

ಮಾನವೀಯ ಮೌಲ್ಯಗಳ ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ನುಖರಾಗೋಣ ಎಂದು ಆಶಿಸುತ್ತಾ …………….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

35 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago