Categories: ಲೇಖನ

ಸೆಲ್ಫೀಗಳ (ಫೋಟೋ) ನಡುವೆ ಮಾಯವಾಗುತ್ತಿರುವ ಮಾನವೀಯತೆ……

ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ ಮನಸ್ಥಿತಿಯ ಹಿಂದೆ ವ್ಯವಸ್ಥೆಯ ಕ್ರೌರ್ಯ – ಮೌಲ್ಯಗಳ ಕುಸಿತ ತನ್ನ ಪ್ರಭಾವ ಬೀರಿದೆ……

ಈ ವಿಷಯದಲ್ಲಿ ಸುಪ್ರೀಂಕೋರ್ಟಿನ ಆದೇಶ ಜನರಿಗೆ ಅನುಕೂಲವಾಗುವಂತಿದ್ದರೂ ನಮ್ಮ ಪೊಲೀಸರ ವರ್ತನೆ ಇದಕ್ಕೆ ಪೂರಕವಾಗಿಲ್ಲ. ಅವರ ಭಾಷೆ ಮತ್ತು ನಡವಳಿಕೆ ಸಾಮಾನ್ಯರ ಬಗ್ಗೆ ಅಸಹನೀಯವಾಗಿಯೇ ಇದೆ…..

ಬ್ಯಾಂಕುಗಳಲ್ಲಿ ಮಾಸಿದ ಹಳೆಯ ಬಟ್ಟೆಯ ಅಥವಾ ಪಂಚೆ ಟವಲ್ ಹಾಕಿದ ಅಮಾಯಕ ಜನರ ಮುಗ್ಧ ಮತ್ತು ತಿಳಿವಳಿಕೆ ಕೊರತೆಯ ಪ್ರಶ್ನೆಗಳಿಗೆ ಅಲ್ಲಿನ ಬಹುತೇಕ ಅಧಿಕಾರಿಗಳು ಉತ್ತರಿಸುವ ರೀತಿ ಅವಮಾನಕರವಾಗಿಯೇ ಇರುತ್ತದೆ……

ಆಸ್ಪತ್ರೆಗಳಲ್ಲಿ ಬಡವರಿಗೆ ನೀಡುವ ಚಿಕಿತ್ಸೆಗಳ ಗುಣಮಟ್ಟದಲ್ಲಿ ಕಣ್ಣಿಗೆ ಕಾಣುವಷ್ಟು ನಿರ್ಲಕ್ಷ್ಯ – ಪಕ್ಷಪಾತವಿರುತ್ತದೆ…..

ಮಾಧ್ಯಮಗಳಲ್ಲಿ ದುಷ್ಟತನಕ್ಕೆ ನೀಡುವ ಪ್ರಾಮುಖ್ಯತೆ ಒಳ್ಳೆಯ – ಅತ್ಯುತ್ತಮ ಸಾಧಕರ ಪ್ರಚಾರಕ್ಕೆ ನೀಡುವುದಿಲ್ಲ. ಕಪಟ ಪ್ರದರ್ಶಕ ಮನೋಭಾವನೆಗೇ ಹೆಚ್ಚಿನ ಆಧ್ಯತೆ ನೀಡುತ್ತಾರೆ…..

ಸರ್ಕಾರದ ಯಾವುದೇ ಇಲಾಖೆಯಲ್ಲಿ ಲಂಚವಿಲ್ಲದೆ – ನಿಮ್ಮನ್ನು ಸತಾಯಿಸದೆ ಕೆಲಸವಾಗಿದೆ ಎಂದರೆ ನೀವು ಅದೃಷ್ಟವಂತರೆಂದೇ ಭಾವಿಸಿ ಅಥವಾ ನೀವು ಪ್ರಭಾವಿಗಳೋ, ರಾಜಕಾರಣಿಗಳ ಸಂಬಂಧಿಗಳೋ, ರೌಡಿಯೋ ಆಗಿರಬೇಕು. ಇಲ್ಲದಿದ್ದರೆ ನಿಮ್ಮ ಸಂಕಷ್ಟಗಳಿಗೆ ಕೊನೆಯೇ ಇಲ್ಲ…..

ಇದು ಕೇವಲ ಉದಾಹರಣೆಗಳಷ್ಟೆ.
ಇಡೀ ವ್ಯವಸ್ಥೆ ಹೀಗೆಯೇ ನಡೆಯುತ್ತದೆ.
ಒಂದು ವೇಳೆ ನೀವು ಶ್ರೀಮಂತರೋ, ಬಲಶಾಲಿಗಳೋ, ಅತಿ ಧೈರ್ಯವಂತರೋ ಆಗಿದ್ದರೆ ವ್ಯವಸ್ಥೆ ಅಷ್ಟೊಂದು ಕಠೋರವಾಗಿ ವರ್ತಿಸುವುದಿಲ್ಲ. ಅಷ್ಟಕ್ಕೇ ಎಲ್ಲಾ ಸರಿಯಿದೆ ಎಂದು ಭಾವಿಸದಿರಿ……

ಜನಸಂಖ್ಯೆಯ ಅತಿಯಾದ ಒತ್ತಡ, ಮೌಲ್ಯಗಳ ಕುಸಿತ, ವೇಗದ ಮತ್ತು ದುರಾಸೆಯ ಜೀವನಶೈಲಿ, ಬೇಗನೆ ನಿರಾಸೆಗೊಳ್ಳುವ ಮನಸ್ಥಿತಿ, ಅದರಿಂದಾಗಿಯೇ ಉಂಟಾದ ಉದಾಸೀನತೆ ಜನರನ್ನು ಒತ್ತಡದಲ್ಲಿಟ್ಟಿದೆ……

ಆದ್ದರಿಂದಲೇ ಅಪಘಾತಗಳಂತ ಸಂದರ್ಭಗಳಲ್ಲಿ ಜನರಿಗೆ ಸಹಾಯಕ್ಕಿಂತ ಸೆಲ್ಫಿಯೇ ಮುಖ್ಯವಾಗುತ್ತದೆ…..

ಅದರೆ, ಕೆಲವು ಅಪರೂಪದ ಸಂದರ್ಭಗಳಲ್ಲಿ ಅಪಘಾತದ ಭೀಕರತೆ ಬಹುಶಃ ಅಲ್ಲಿದ್ದ ಜನರು ರಕ್ತ ಮತ್ತು ದೇಹದ ಭಾಗಗಳ ಚೆಲ್ಲಾಪಿಲ್ಲಿಯಿಂದ, ಭಯ ಆತಂಕದಿಂದ ಮನಸ್ಸಿದ್ದರೂ ಸಹಾಯಕ್ಕೆ ಬರದಿರುವ ಸಾಧ್ಯತೆಯೂ ಇರುತ್ತದೆ……

ನಮ್ಮ ಆತ್ಮೀಯರು ಅಲ್ಲಿದ್ದರೆ ಅವರಿಗೆ ಸಹಾಯ ಖಂಡಿತ ಸಿಗುತ್ತದೆ. ಅಪರಿಚಿತರ ಬಗ್ಗೆ ಮಾತ್ರ ಈ ಧೋರಣೆಯಿದೆ. ಏಕೆಂದರೆ ಟಿವಿಯಲ್ಲಿ ಆ ದೃಶ್ಯ ನೋಡುವಾಗಲೇ ಮೈ ನಡುಗುತ್ತದೆ.. ಇನ್ನು ಸ್ಪಾಟ್ ನಲ್ಲಿ ಇದ್ದರೆ ತಲೆತಿರುಗಿ ಬಿದ್ದರೂ ಆಶ್ಚರ್ಯವಿಲ್ಲ. ಇಲ್ಲಿ ಕುಳಿತುಕೊಂಡು ಹೇಳುವಷ್ಟು ಸುಲಭ ಸ್ಥಿತಿ ಈ ವಿಷಯದಲ್ಲಿ ಕಷ್ಟ……

ಆದ್ದರಿಂದ ಕೇವಲ ಇದೊಂದೆ ವಿಷಯದಲ್ಲಿ ಸುಧಾರಣೆ ಸಾಧ್ಯವಿಲ್ಲ. ಇಡೀ ವ್ಯವಸ್ಥೆಯ ಮಾನಸಿಕ – ನೈತಿಕ ಗಟ್ಟಿತನವನ್ನು ಪುನರ್ ರೂಪಿಸಬೇಕಾದ ಅವಶ್ಯಕತೆ ಇದೆ……

ಇತ್ತೀಚೆಗೆ ಅಪಘಾತದ ಸಂದರ್ಭದಲ್ಲಿ ಕೆಲವರು ಸಹಾಯಕ್ಕಿಂತ ಫೋಟೋ ತೆಗೆಯಲು ತೋರಿಸಿದ ಆಸಕ್ತಿಯನ್ನು ಟಿವಿ ಚಾನೆಲ್ ನಲ್ಲಿ ವೀಕ್ಷಿಸಿದಾಗ ಮೂಡಿದ ಭಾವನೆಗಳು……

ಮಾನವೀಯ ಮೌಲ್ಯಗಳ ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ನುಖರಾಗೋಣ ಎಂದು ಆಶಿಸುತ್ತಾ …………….

ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago