ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಕರ್ನಾಟಕ ಐಡಲ್ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
ಇದೇ ತಿಂಗಳ 17(ಬುಧವಾರ)ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ ಕೋರಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ಕನ್ನಡದ ಪ್ರಣಯ ರಾಜ ಡಾ. ಶ್ರೀನಾಥ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಕುರುಣಾ ಜೈನ್, ಭಾರತ ಹಾಕಿ ತಂಡದ ಮಾಜಿ ನಾಯಕ ವಿ.ಆರ್.ರಘುನಾಥ್ ಹಾಗೂ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಹೆಚ್.ಎನ್.ಗಿರೀಶ್ ಸೇರಿದಂತೆ ಹಲವರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಸಚಿವ ಚಲುವರಾಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವರು, ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಇನ್ನು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ನಟಿ ಅನು ಪ್ರಭಾಕರ್, ನಟ ವಿನಯ್ ರಾಜ್ಕುಮಾರ್, ನಟ ರಾಣ, ನಟಿ ಅದ್ವಿತಿ ಶೆಟ್ಟಿ ವೇದಿಕೆ ಮೇಲೆ ಇದ್ದು ಸಾಧಕರನ್ನು ಹುರಿದುಂಬಿಸಲಿದ್ದಾರೆ.
ಇಡೀ ಕರ್ನಾಟಕ ಐಡಲ್ ಅವಾರ್ಡ್ಸ್ 2025 ಪ್ರದಾನ ಕಾರ್ಯಕ್ರಮವನ್ನ ಸಂಪಾದಕರಾದ ರವಿ ಎಸ್. ನಡೆಸಿಕೊಡಲಿದ್ದಾರೆ.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…