ಸೆ.17ರಂದು ಜೀ ಕನ್ನಡ ನ್ಯೂಸ್‌ ಕರ್ನಾಟಕ ಐಡಲ್‌ ಅವಾರ್ಡ್ಸ್‌-2025 ಪ್ರದಾನ ಕಾರ್ಯಕ್ರಮ

ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್‌ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಕರ್ನಾಟಕ ಐಡಲ್‌ ಅವಾರ್ಡ್ಸ್‌-2025 ಪ್ರದಾನ ಮಾಡುತ್ತಿದೆ.

ಇದೇ ತಿಂಗಳ 17(ಬುಧವಾರ)ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ ಕೋರಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ಕನ್ನಡದ ಪ್ರಣಯ ರಾಜ ಡಾ. ಶ್ರೀನಾಥ್‌ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟರ್‌ ಕುರುಣಾ ಜೈನ್‌, ಭಾರತ ಹಾಕಿ ತಂಡದ ಮಾಜಿ ನಾಯಕ ವಿ.ಆರ್‌.ರಘುನಾಥ್‌ ಹಾಗೂ ಪ್ಯಾರಾಲಿಂಪಿಕ್ಸ್‌ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಹೆಚ್‌.ಎನ್‌.ಗಿರೀಶ್‌ ಸೇರಿದಂತೆ ಹಲವರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್‌, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಸಚಿವ ಚಲುವರಾಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವರು, ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಇನ್ನು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್‌.ಕಿರಣ್‌ ಕುಮಾರ್‌, ನಟಿ ಅನು ಪ್ರಭಾಕರ್‌, ನಟ ವಿನಯ್‌ ರಾಜ್‌ಕುಮಾರ್‌, ನಟ ರಾಣ, ನಟಿ ಅದ್ವಿತಿ ಶೆಟ್ಟಿ ವೇದಿಕೆ ಮೇಲೆ ಇದ್ದು ಸಾಧಕರನ್ನು ಹುರಿದುಂಬಿಸಲಿದ್ದಾರೆ.

ಇಡೀ ಕರ್ನಾಟಕ ಐಡಲ್‌ ಅವಾರ್ಡ್ಸ್‌‌ 2025 ಪ್ರದಾನ ಕಾರ್ಯಕ್ರಮವನ್ನ ಸಂಪಾದಕರಾದ ರವಿ ಎಸ್‌. ನಡೆಸಿಕೊಡಲಿದ್ದಾರೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

5 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

6 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

7 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

9 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

20 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago