ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಕರ್ನಾಟಕ ಐಡಲ್ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
ಇದೇ ತಿಂಗಳ 17(ಬುಧವಾರ)ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ ಕೋರಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ಕನ್ನಡದ ಪ್ರಣಯ ರಾಜ ಡಾ. ಶ್ರೀನಾಥ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಕುರುಣಾ ಜೈನ್, ಭಾರತ ಹಾಕಿ ತಂಡದ ಮಾಜಿ ನಾಯಕ ವಿ.ಆರ್.ರಘುನಾಥ್ ಹಾಗೂ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಹೆಚ್.ಎನ್.ಗಿರೀಶ್ ಸೇರಿದಂತೆ ಹಲವರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಸಚಿವ ಚಲುವರಾಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವರು, ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಇನ್ನು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ನಟಿ ಅನು ಪ್ರಭಾಕರ್, ನಟ ವಿನಯ್ ರಾಜ್ಕುಮಾರ್, ನಟ ರಾಣ, ನಟಿ ಅದ್ವಿತಿ ಶೆಟ್ಟಿ ವೇದಿಕೆ ಮೇಲೆ ಇದ್ದು ಸಾಧಕರನ್ನು ಹುರಿದುಂಬಿಸಲಿದ್ದಾರೆ.
ಇಡೀ ಕರ್ನಾಟಕ ಐಡಲ್ ಅವಾರ್ಡ್ಸ್ 2025 ಪ್ರದಾನ ಕಾರ್ಯಕ್ರಮವನ್ನ ಸಂಪಾದಕರಾದ ರವಿ ಎಸ್. ನಡೆಸಿಕೊಡಲಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…