ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2024) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 2 ವರೆಗೆ ಸ್ವಭಾವ್ ಸ್ವಚ್ಛತಾ- ಸಂಸ್ಕಾರ್” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.
ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ಕಸದ ರಾಶಿಗಳು ಇದೆ ಅವುಗಳನ್ನು ಸ್ವಚ್ಛತೆ ಮಾಡುವ ಮೂಲಕ , ನೈರ್ಮಲ್ಯ ಸಾಧಿಸಬೇಕು. ಹಾಗೆಯೇ ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಪ್ರತಿ ತಾಲ್ಲೂಕು, ನಗರಸಭೆ, ಪುರಸಭೆ, ಪ್ರತಿ ಗ್ರಾಮ ಪಂಚಾಯತಿ, ಪ್ರತಿ ಹೋಬಳಿ ಪ್ರತಿ ಗ್ರಾಮಗಳಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳು ಎಲ್ಲಾ ಕಚೇರಿಗಳನ್ನು ಸ್ವಚ್ಛತೆ ಮಾಡುವ ಮೂಲಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾಥ, ರ್ಯಾಲಿಗಳು, ಸ್ಪರ್ಧೆಗಳು, ಕಾರ್ಮಿಕರ ಆರೋಗ್ಯ ಶಿಬಿರ ಮುಂತಾದ ಸ್ವಚ್ಛತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಂದೋಲನದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಬೇಕು. ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ಸಾರ್ವಜನಿಕರು, ಎಲ್ಲಾ ಅಧಿಕಾರಿಗಳು, ಎಲ್ಲಾ ಸಿಬ್ಬಂದಿಗಳು ಈ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಪೋಟೋ, ವಿಡಿಯೋ ಗಳನ್ನು ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನ ಯಶಸ್ವಿಗೊಳಿಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಕೋರಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…