ಸೆ. 17 ರಿಂದ ಅ.02 ರವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2024) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 2 ವರೆಗೆ ಸ್ವಭಾವ್‌ ಸ್ವಚ್ಛತಾ- ಸಂಸ್ಕಾರ್” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.

ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ಕಸದ ರಾಶಿಗಳು ಇದೆ ಅವುಗಳನ್ನು ಸ್ವಚ್ಛತೆ ಮಾಡುವ ಮೂಲಕ , ನೈರ್ಮಲ್ಯ ಸಾಧಿಸಬೇಕು. ಹಾಗೆಯೇ ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಪ್ರತಿ ತಾಲ್ಲೂಕು, ನಗರಸಭೆ, ಪುರಸಭೆ, ಪ್ರತಿ ಗ್ರಾಮ ಪಂಚಾಯತಿ, ಪ್ರತಿ ಹೋಬಳಿ ಪ್ರತಿ ಗ್ರಾಮಗಳಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳು ಎಲ್ಲಾ ಕಚೇರಿಗಳನ್ನು ಸ್ವಚ್ಛತೆ ಮಾಡುವ ಮೂಲಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾಥ, ರ್ಯಾಲಿಗಳು, ಸ್ಪರ್ಧೆಗಳು, ಕಾರ್ಮಿಕರ ಆರೋಗ್ಯ ಶಿಬಿರ ಮುಂತಾದ ಸ್ವಚ್ಛತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಂದೋಲನದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಬೇಕು. ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ಸಾರ್ವಜನಿಕರು, ಎಲ್ಲಾ ಅಧಿಕಾರಿಗಳು, ಎಲ್ಲಾ ಸಿಬ್ಬಂದಿಗಳು ಈ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.

ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಪೋಟೋ, ವಿಡಿಯೋ ಗಳನ್ನು ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನ ಯಶಸ್ವಿಗೊಳಿಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಕೋರಿದ್ದಾರೆ.

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

7 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

9 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

9 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

18 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 day ago