ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2024) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 2 ವರೆಗೆ ಸ್ವಭಾವ್ ಸ್ವಚ್ಛತಾ- ಸಂಸ್ಕಾರ್” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.
ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ಕಸದ ರಾಶಿಗಳು ಇದೆ ಅವುಗಳನ್ನು ಸ್ವಚ್ಛತೆ ಮಾಡುವ ಮೂಲಕ , ನೈರ್ಮಲ್ಯ ಸಾಧಿಸಬೇಕು. ಹಾಗೆಯೇ ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಪ್ರತಿ ತಾಲ್ಲೂಕು, ನಗರಸಭೆ, ಪುರಸಭೆ, ಪ್ರತಿ ಗ್ರಾಮ ಪಂಚಾಯತಿ, ಪ್ರತಿ ಹೋಬಳಿ ಪ್ರತಿ ಗ್ರಾಮಗಳಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳು ಎಲ್ಲಾ ಕಚೇರಿಗಳನ್ನು ಸ್ವಚ್ಛತೆ ಮಾಡುವ ಮೂಲಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾಥ, ರ್ಯಾಲಿಗಳು, ಸ್ಪರ್ಧೆಗಳು, ಕಾರ್ಮಿಕರ ಆರೋಗ್ಯ ಶಿಬಿರ ಮುಂತಾದ ಸ್ವಚ್ಛತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಂದೋಲನದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಬೇಕು. ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ಸಾರ್ವಜನಿಕರು, ಎಲ್ಲಾ ಅಧಿಕಾರಿಗಳು, ಎಲ್ಲಾ ಸಿಬ್ಬಂದಿಗಳು ಈ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಪೋಟೋ, ವಿಡಿಯೋ ಗಳನ್ನು ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನ ಯಶಸ್ವಿಗೊಳಿಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಕೋರಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…