Categories: ಕೋಲಾರ

ಸೆ.19 ರಂದು ಬೈರತಿ ಸುರೇಶ್ ಅವರಿಂದ 12 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ- ಕೊತ್ತೂರು ಮಂಜುನಾಥ್

 

ಕೋಲಾರ: ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಸೆ.19ರಂದು ನಗರಕ್ಕೆ ಭೇಟಿ ನೀಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಅವರಿಂದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ 12 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲೂಕಿನ ನರಸಾಪುರದಲ್ಲಿ ಜೋಡಿ ರಸ್ತೆ ನಿರ್ಮಿಸಲಾಗುತ್ತಿದೆ. ಡಿವೈಡರ್‌, ಬೀದಿ ದೀಪ, ಕ್ಯಾಮೆರಾ ಅಳವಡಿಕೆಯೂ ಸೇರಿದೆ. ಸ್ವಾತಿ ಹೋಟೆಲ್‌ ಬಳಿಯ ಬ್ರಿಡ್ಜ್‌ನಿಂದ ಬೆಳ್ಳೂರು ಕಡೆ ಸಾಗುವ ವೃತ್ತದವರೆಗೆ 7 ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಜೊತೆಗೆ ಖಾಜಿಕಲ್ಲಹಳ್ಳಿ ರಸ್ತೆಯನ್ನು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಟೆಂಡರ್‌ ಆಗಿದ್ದು, ಕೆಲಸ ಶುರುವಾಗಿ ಆರು ತಿಂಗಳಲ್ಲಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ಸಹ ನೀಡಲಾಗಿದೆ ಎಂದರು.

ಚೌಡದೇನಹಳ್ಳಿ, ವಲ್ಲಭಿ ರಸ್ತೆ, ಮದ್ದೇರಿ, ಸೀತಿ ರಸ್ತೆಗಳನ್ನೂ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಈ ಕಾಮಗಾರಿಗಳಿಗೆ ಸ್ಥಳೀಯವಾಗಿ ನಾವೇ ಶಂಕುಸ್ಥಾಪನೆ ನೆರವೇರಿಸಲಿದ್ದೇವೆ ಲೋಕೋಪಯೋಗಿ ಇಲಾಖೆಯಿಂದ 45 ಕೋಟಿ ಮೊತ್ತದ ಕಾಮಗಾರಿಗಳಿಗೆ ಟೆಂಡರ್‌ ಆಗಿದೆ. ಇದರಲ್ಲಿ 20 ಕೋಟಿ ಮೊತ್ತದ ಕಾಮಗಾರಿ ಆರ್‌ಡಿಪಿಆರ್‌ನಿಂದ ನಡೆಯಲಿದೆ. ಇನ್ನೂ 12 ಕೋಟಿ ಹಾಗೂ 25 ಕೋಟಿ ವೆಚ್ಚದ ಕಾಮಗಾರಿ ಟೆಂಡರ್‌ ಪ್ರಕಿಯೆಯಲ್ಲಿದೆ. ಮಾದಮಂಗಲದಿಂದ ಮಣಿನಹಳ್ಳಿವರೆಗೆ 20 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯಬೇಕಿದೆ ಅಮ್ಮನಲ್ಲೂರಿನಿಂದ ಕ್ಯಾಲನೂರು ರಸ್ತೆ ಕಾಮಗಾರಿ 2 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ. ಚಂಜಿಮಲೆಯಿಂದ ಬೈರಂಡಹಳ್ಳಿ, ಕಡಗಟ್ಟೂರು, ಕಾಮಂಡಹಳ್ಳಿವರೆಗೆ 5 ಕೋಟಿ ವೆಚ್ಚದಲ್ಲಿ ಕೆಲಸ ನಡೆಯಲಿದೆ ಎಂದು ತಿಳಿಸಿದರು

ಸುಮಾರು 60 ಕೋಟಿಯ ಅನುದಾನದಲ್ಲಿ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಹಳೆ ಬಸ್‌ ನಿಲ್ದಾಣ ನವೀಕರಣ, ಪಾದಚಾರಿ ಮಾರ್ಗ ಹಾಗೂ ಉದ್ಯಾನವನ ಅಭಿವೃದ್ಧಿ ಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಟೆಂಡರ್‌ ಪ್ರಕ್ರಿಯೆ ಆರಂಭವಾಗಬೇಕಿದೆ ಎಂದರು.

ವೇಮಗಲ್‌, ನರಸಾಪುರ ಹೋಬಳಿಯಲ್ಲಿ ಯಾವುದೇ ರಸ್ತೆ ಅಭಿವೃದ್ಧಿ ಕಾಮಗಾರಿ ಬಾಕಿ ಇಲ್ಲ. ಶೇ 90ರಷ್ಟು ಕಾಮಗಾರ ಕೈಗೆತ್ತಿಕೊಳ್ಳಲಾಗಿದೆ. ಕೆಲವೆಡೆ ಸಂಪೂರ್ಣ ಹಾಳಾಗಿದ್ದು, ಹೊಸದಾಗಿ ರಸ್ತೆ ನಿರ್ಮಿಸಲಾಗುತ್ತಿದೆ ಸೆ.20ಕ್ಕೆ ವೇಮಗಲ್‌ನಲ್ಲಿ ಉದ್ಯಾನವನ, ಕಾಂಕ್ರೀಟ್‌ ರಸ್ತೆ ಅಭಿವೃದ್ಧಿ ಸೇರಿದಂತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್‌ ಮುಖಂಡರಾದ ಗದ್ದೆಕಣ್ಣೂರು ದಯಾನಂದ್, ಮೈಲಾಂಡಹಳ್ಳಿ ಮುರಳಿ, ಉರಟಾಗ್ರಹಾರ ಚೌಡರೆಡ್ಡಿ, ಮುಂತಾದವರು ಇದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

3 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

5 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

9 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

10 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

12 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

12 hours ago