Categories: ಕೋಲಾರ

ಸೆ.19 ರಂದು ಬೈರತಿ ಸುರೇಶ್ ಅವರಿಂದ 12 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ- ಕೊತ್ತೂರು ಮಂಜುನಾಥ್

 

ಕೋಲಾರ: ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಸೆ.19ರಂದು ನಗರಕ್ಕೆ ಭೇಟಿ ನೀಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಅವರಿಂದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ 12 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲೂಕಿನ ನರಸಾಪುರದಲ್ಲಿ ಜೋಡಿ ರಸ್ತೆ ನಿರ್ಮಿಸಲಾಗುತ್ತಿದೆ. ಡಿವೈಡರ್‌, ಬೀದಿ ದೀಪ, ಕ್ಯಾಮೆರಾ ಅಳವಡಿಕೆಯೂ ಸೇರಿದೆ. ಸ್ವಾತಿ ಹೋಟೆಲ್‌ ಬಳಿಯ ಬ್ರಿಡ್ಜ್‌ನಿಂದ ಬೆಳ್ಳೂರು ಕಡೆ ಸಾಗುವ ವೃತ್ತದವರೆಗೆ 7 ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಜೊತೆಗೆ ಖಾಜಿಕಲ್ಲಹಳ್ಳಿ ರಸ್ತೆಯನ್ನು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಟೆಂಡರ್‌ ಆಗಿದ್ದು, ಕೆಲಸ ಶುರುವಾಗಿ ಆರು ತಿಂಗಳಲ್ಲಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ಸಹ ನೀಡಲಾಗಿದೆ ಎಂದರು.

ಚೌಡದೇನಹಳ್ಳಿ, ವಲ್ಲಭಿ ರಸ್ತೆ, ಮದ್ದೇರಿ, ಸೀತಿ ರಸ್ತೆಗಳನ್ನೂ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಈ ಕಾಮಗಾರಿಗಳಿಗೆ ಸ್ಥಳೀಯವಾಗಿ ನಾವೇ ಶಂಕುಸ್ಥಾಪನೆ ನೆರವೇರಿಸಲಿದ್ದೇವೆ ಲೋಕೋಪಯೋಗಿ ಇಲಾಖೆಯಿಂದ 45 ಕೋಟಿ ಮೊತ್ತದ ಕಾಮಗಾರಿಗಳಿಗೆ ಟೆಂಡರ್‌ ಆಗಿದೆ. ಇದರಲ್ಲಿ 20 ಕೋಟಿ ಮೊತ್ತದ ಕಾಮಗಾರಿ ಆರ್‌ಡಿಪಿಆರ್‌ನಿಂದ ನಡೆಯಲಿದೆ. ಇನ್ನೂ 12 ಕೋಟಿ ಹಾಗೂ 25 ಕೋಟಿ ವೆಚ್ಚದ ಕಾಮಗಾರಿ ಟೆಂಡರ್‌ ಪ್ರಕಿಯೆಯಲ್ಲಿದೆ. ಮಾದಮಂಗಲದಿಂದ ಮಣಿನಹಳ್ಳಿವರೆಗೆ 20 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯಬೇಕಿದೆ ಅಮ್ಮನಲ್ಲೂರಿನಿಂದ ಕ್ಯಾಲನೂರು ರಸ್ತೆ ಕಾಮಗಾರಿ 2 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ. ಚಂಜಿಮಲೆಯಿಂದ ಬೈರಂಡಹಳ್ಳಿ, ಕಡಗಟ್ಟೂರು, ಕಾಮಂಡಹಳ್ಳಿವರೆಗೆ 5 ಕೋಟಿ ವೆಚ್ಚದಲ್ಲಿ ಕೆಲಸ ನಡೆಯಲಿದೆ ಎಂದು ತಿಳಿಸಿದರು

ಸುಮಾರು 60 ಕೋಟಿಯ ಅನುದಾನದಲ್ಲಿ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಹಳೆ ಬಸ್‌ ನಿಲ್ದಾಣ ನವೀಕರಣ, ಪಾದಚಾರಿ ಮಾರ್ಗ ಹಾಗೂ ಉದ್ಯಾನವನ ಅಭಿವೃದ್ಧಿ ಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಟೆಂಡರ್‌ ಪ್ರಕ್ರಿಯೆ ಆರಂಭವಾಗಬೇಕಿದೆ ಎಂದರು.

ವೇಮಗಲ್‌, ನರಸಾಪುರ ಹೋಬಳಿಯಲ್ಲಿ ಯಾವುದೇ ರಸ್ತೆ ಅಭಿವೃದ್ಧಿ ಕಾಮಗಾರಿ ಬಾಕಿ ಇಲ್ಲ. ಶೇ 90ರಷ್ಟು ಕಾಮಗಾರ ಕೈಗೆತ್ತಿಕೊಳ್ಳಲಾಗಿದೆ. ಕೆಲವೆಡೆ ಸಂಪೂರ್ಣ ಹಾಳಾಗಿದ್ದು, ಹೊಸದಾಗಿ ರಸ್ತೆ ನಿರ್ಮಿಸಲಾಗುತ್ತಿದೆ ಸೆ.20ಕ್ಕೆ ವೇಮಗಲ್‌ನಲ್ಲಿ ಉದ್ಯಾನವನ, ಕಾಂಕ್ರೀಟ್‌ ರಸ್ತೆ ಅಭಿವೃದ್ಧಿ ಸೇರಿದಂತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್‌ ಮುಖಂಡರಾದ ಗದ್ದೆಕಣ್ಣೂರು ದಯಾನಂದ್, ಮೈಲಾಂಡಹಳ್ಳಿ ಮುರಳಿ, ಉರಟಾಗ್ರಹಾರ ಚೌಡರೆಡ್ಡಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

4 hours ago

ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು…

ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…

5 hours ago

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

17 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

2 days ago